ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಬುಧವಾರ ಬೆಳಿಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯ ಬಳಿ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕದ ಮೂಲಕ ಪಠಿಸಿದರು.ಮಹಾರಾಷ್ಟ್ರದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.ಮುಂಬೈ, ಪುಣೆ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ಹಲವು ಕಾರ್ಯಕರ್ತರನ್ನು ಬಂಧಿಸಿದ್ದಾರೆ.