<p><strong>ನವದೆಹಲಿ: </strong>ಕೇಂದ್ರ ಸರ್ಕಾರವು 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವುದು ಸಂತಸ ವಿಷಯವಾಗಿದೆ ಎಂದಿರುವ ಸುಪ್ರೀಂಕೋರ್ಟ್, ಮೌಲ್ಯಮಾಪನಕ್ಕಾಗಿ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ಕುರಿತು ಎರಡು ವಾರಗಳಲ್ಲಿ ಮಾಹಿತಿ ನೀಡುವಂತೆ ಸಿಬಿಎಸ್ಇ ಮತ್ತು ಸಿಐಸಿಎಸ್ಇಗೆ ಗುರುವಾರ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನ್ಯಾಯಪೀಠವು ಈ ಕುರಿತ ದಾಖಲೆಗಳನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಸಿಐಎಸ್ಸಿಇ ಪರ ವಕೀಲ ಜೆ.ಕೆ.ದಾಸ್ ಅವರಿಗೆ ಸೂಚಿಸಿತು.</p>.<p>ಹಲವು ವಿದ್ಯಾರ್ಥಿಗಳು ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲಿದ್ದಾರೆ. ಹಾಗಾಗಿ ಅವರ 12ನೇ ತರಗತಿಯ ಮೌಲ್ಯಮಾಪನ ವಿಧಾನಕ್ಕೆ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ದಾಖಲೆಗಳನ್ನು ಸಲ್ಲಿಸಬೇಕು. ಇದಕ್ಕಾಗಿ ಹೆಚ್ಚಿನ ಅವಧಿ ಕೊಡಲು ಆಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.</p>.<p>‘ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಕೇಳಿದ ಪರಿಹಾರದಂತೆ ಇದೂ ಅಷ್ಟೇ ಮುಖ್ಯವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಕೋವಿಡ್ ಪಿಡುಗು ವ್ಯಾಪಕವಾಗಿರುವ ಕಾರಣ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ರದ್ದುಪಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/rajasthan-government-cancels-class-10th-and-class-12th-state-board-exams-835617.html" target="_blank">ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮದ 10, 12ನೇ ತರಗತಿ ಪರೀಕ್ಷೆಗಳು ರದ್ದು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರ ಸರ್ಕಾರವು 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವುದು ಸಂತಸ ವಿಷಯವಾಗಿದೆ ಎಂದಿರುವ ಸುಪ್ರೀಂಕೋರ್ಟ್, ಮೌಲ್ಯಮಾಪನಕ್ಕಾಗಿ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ಕುರಿತು ಎರಡು ವಾರಗಳಲ್ಲಿ ಮಾಹಿತಿ ನೀಡುವಂತೆ ಸಿಬಿಎಸ್ಇ ಮತ್ತು ಸಿಐಸಿಎಸ್ಇಗೆ ಗುರುವಾರ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನ್ಯಾಯಪೀಠವು ಈ ಕುರಿತ ದಾಖಲೆಗಳನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಸಿಐಎಸ್ಸಿಇ ಪರ ವಕೀಲ ಜೆ.ಕೆ.ದಾಸ್ ಅವರಿಗೆ ಸೂಚಿಸಿತು.</p>.<p>ಹಲವು ವಿದ್ಯಾರ್ಥಿಗಳು ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲಿದ್ದಾರೆ. ಹಾಗಾಗಿ ಅವರ 12ನೇ ತರಗತಿಯ ಮೌಲ್ಯಮಾಪನ ವಿಧಾನಕ್ಕೆ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ದಾಖಲೆಗಳನ್ನು ಸಲ್ಲಿಸಬೇಕು. ಇದಕ್ಕಾಗಿ ಹೆಚ್ಚಿನ ಅವಧಿ ಕೊಡಲು ಆಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.</p>.<p>‘ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಕೇಳಿದ ಪರಿಹಾರದಂತೆ ಇದೂ ಅಷ್ಟೇ ಮುಖ್ಯವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಕೋವಿಡ್ ಪಿಡುಗು ವ್ಯಾಪಕವಾಗಿರುವ ಕಾರಣ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ರದ್ದುಪಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/rajasthan-government-cancels-class-10th-and-class-12th-state-board-exams-835617.html" target="_blank">ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮದ 10, 12ನೇ ತರಗತಿ ಪರೀಕ್ಷೆಗಳು ರದ್ದು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>