ಜೈಪುರ: ಸರ್ಕಾರದ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಸ್ವಾಗತಿಸಿರುವ ಅಜ್ಮೀರ್ ದರ್ಗಾದ ದಿವಾನ್ ಜೈನುಲ್ ಅಬೆದಿನ್ ಅಲಿ ಖಾನ್, ‘ಅಭಿಯಾನವು ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸಲಿದೆ ಮತ್ತು ಜಗತ್ತಿಗೆ ಏಕತೆಯ ಸಂದೇಶವನ್ನು ಸಾರಲಿದೆ’ ಎಂದು ಶನಿವಾರ ಹೇಳಿದ್ದಾರೆ.
‘ಜಾತಿ, ಧರ್ಮವನ್ನು ಮರೆತು ಪ್ರತಿಯೊಬ್ಬ ಭಾರತೀಯರೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು’ ಎಂದೂ ಅವರು ಸಲಹೆ ನೀಡಿದ್ದಾರೆ.