ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಾನು ಒಬ್ಬ ಸಂಸದನಾಗಿ, ನನ್ನ ರಾಜ್ಯಸಭಾ ವೇತನವನ್ನು ರೈತರ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಕಲ್ಯಾಣಕ್ಕೆ ಮೀಸಲಿಡಬೇಕೆಂದುಕೊಂಡಿದ್ದೇನೆ. ನಮ್ಮ ದೇಶದ ಸುಧಾರಣೆಗೆ ಕೊಡುಗೆ ನೀಡಲೆಂದೇ ನಾನು ರಾಜಕೀಯಕ್ಕೆ ಸೇರಿದ್ದೇನೆ. ದೇಶದ ಸುಧಾರಣೆಗೆ ನನ್ನ ಕೈಲಾದಷ್ಟು ಶ್ರಮಿಸುತ್ತೇನೆ. ಜೈ ಹಿಂದ್’ ಎಂದು ಹೇಳಿದ್ದಾರೆ.