<p><strong>ಚಂಡಿಗಡ</strong>: ‘ನಮ್ಮ ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರೈತರನ್ನು ಪ್ರಚೋದಿಸುತ್ತಿದ್ದಾರೆ‘ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆರೋಪಿಸಿದ್ದಾರೆ.</p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಯಾರು ರೈತ ವಿರೋಧಿ ಕ್ಯಾಪ್ಟನ್ ಅಮರೀಂದರ್ ಜಿ ? ಪಂಜಾಬ್ ರಾಜ್ಯವೋ, ಹರಿಯಾಣವೋ ? ಎಂದು ಪ್ರಶ್ನಿಸಿರುವ ಖಟ್ಟರ್, ‘ನಮ್ಮ ಸರ್ಕಾರ ರೈತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ‘ ಎಂದು ಹೇಳುವ ಜತೆಗೆ, ರಾಜ್ಯದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದ್ದಾರೆ.</p>.<p>‘ಹರಿಯಾಣ ಸರ್ಕಾರ ಭತ್ತ, ಗೋಧಿ, ಸಾಸಿವೆ, ಬಾಜ್ರಾ, ಕಡಲೆ, ಹೆಸರು, ಮುಸುಕಿನ ಜೋಳ, ಶೇಂಗಾ, ಸೂರ್ಯಕಾಂತಿ, ಹತ್ತಿ – ಒಟ್ಟು ಹತ್ತು ಬೆಳೆಗಳನ್ನು ರೈತರಿಗೆ ಬೆಂಬಲ ಬೆಲೆ ನೀಡಿ(ಎಂಎಸ್ಪಿ) ಖರೀದಿಸುತ್ತಿದೆ. ಪಂಜಾಬ್ ಈ ರೀತಿ ಎಂಎಸ್ಪಿ ನೀಡಿ ಎಷ್ಟು ಬೆಳೆಗಳನ್ನು ರೈತರಿಂದ ಖರೀದಿಸುತ್ತಿದೆ‘ ಎಂದು ಅವರು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ‘ಕಳೆದ ಏಳು ವರ್ಷಗಳಿಂದ ಹರಿಯಾಣವು ತನ್ನ ರೈತರಿಗೆ ಕಬ್ಬಿಗೆ ದೇಶದಲ್ಲಿಯೇ ಅತ್ಯಧಿಕ ಎಂಎಸ್ಪಿಯನ್ನು ಪಾವತಿಸುತ್ತಿದೆ‘ ಎಂದೂ ಅವರು ಹೇಳಿದ್ದಾರೆ.</p>.<p>ಹರಿಯಾಣದ ಕರ್ನಾಲ್ನಲ್ಲಿ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದನ್ನು ಉಲ್ಲೇಖಿಸಿದ್ದ ಅಮರೀಂದರ್ ಸಿಂಗ್, ‘ನಿಮ್ಮ ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ನಡೆಸಿರುವುದು ನಾಚಿಕೇಡಿನ ಸಂಗತಿ‘ ಎಂದು ಇತ್ತೀಚೆಗೆ ಆರೋಪಿಸಿದ್ದರು.</p>.<p>‘ನಿಮ್ಮ ಪಕ್ಷ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಕೃಷಿ ವಲಯವನ್ನು ಸಂಕಷ್ಟಕ್ಕೆ ದೂಡಿದೆ. ಮೊದಲು ಆ ಕಾಯ್ದೆಗಳನ್ನು ರದ್ದುಗೊಳಿಸಿ‘ ಎಂದು ಒತ್ತಾಯಿಸಿದ್ದರು. ಇದಕ್ಕೆ ಮನೋಹರ್ ಖಟ್ಟರ್ ಅವರು ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಡ</strong>: ‘ನಮ್ಮ ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರೈತರನ್ನು ಪ್ರಚೋದಿಸುತ್ತಿದ್ದಾರೆ‘ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆರೋಪಿಸಿದ್ದಾರೆ.</p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಯಾರು ರೈತ ವಿರೋಧಿ ಕ್ಯಾಪ್ಟನ್ ಅಮರೀಂದರ್ ಜಿ ? ಪಂಜಾಬ್ ರಾಜ್ಯವೋ, ಹರಿಯಾಣವೋ ? ಎಂದು ಪ್ರಶ್ನಿಸಿರುವ ಖಟ್ಟರ್, ‘ನಮ್ಮ ಸರ್ಕಾರ ರೈತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ‘ ಎಂದು ಹೇಳುವ ಜತೆಗೆ, ರಾಜ್ಯದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದ್ದಾರೆ.</p>.<p>‘ಹರಿಯಾಣ ಸರ್ಕಾರ ಭತ್ತ, ಗೋಧಿ, ಸಾಸಿವೆ, ಬಾಜ್ರಾ, ಕಡಲೆ, ಹೆಸರು, ಮುಸುಕಿನ ಜೋಳ, ಶೇಂಗಾ, ಸೂರ್ಯಕಾಂತಿ, ಹತ್ತಿ – ಒಟ್ಟು ಹತ್ತು ಬೆಳೆಗಳನ್ನು ರೈತರಿಗೆ ಬೆಂಬಲ ಬೆಲೆ ನೀಡಿ(ಎಂಎಸ್ಪಿ) ಖರೀದಿಸುತ್ತಿದೆ. ಪಂಜಾಬ್ ಈ ರೀತಿ ಎಂಎಸ್ಪಿ ನೀಡಿ ಎಷ್ಟು ಬೆಳೆಗಳನ್ನು ರೈತರಿಂದ ಖರೀದಿಸುತ್ತಿದೆ‘ ಎಂದು ಅವರು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ‘ಕಳೆದ ಏಳು ವರ್ಷಗಳಿಂದ ಹರಿಯಾಣವು ತನ್ನ ರೈತರಿಗೆ ಕಬ್ಬಿಗೆ ದೇಶದಲ್ಲಿಯೇ ಅತ್ಯಧಿಕ ಎಂಎಸ್ಪಿಯನ್ನು ಪಾವತಿಸುತ್ತಿದೆ‘ ಎಂದೂ ಅವರು ಹೇಳಿದ್ದಾರೆ.</p>.<p>ಹರಿಯಾಣದ ಕರ್ನಾಲ್ನಲ್ಲಿ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದನ್ನು ಉಲ್ಲೇಖಿಸಿದ್ದ ಅಮರೀಂದರ್ ಸಿಂಗ್, ‘ನಿಮ್ಮ ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ನಡೆಸಿರುವುದು ನಾಚಿಕೇಡಿನ ಸಂಗತಿ‘ ಎಂದು ಇತ್ತೀಚೆಗೆ ಆರೋಪಿಸಿದ್ದರು.</p>.<p>‘ನಿಮ್ಮ ಪಕ್ಷ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಕೃಷಿ ವಲಯವನ್ನು ಸಂಕಷ್ಟಕ್ಕೆ ದೂಡಿದೆ. ಮೊದಲು ಆ ಕಾಯ್ದೆಗಳನ್ನು ರದ್ದುಗೊಳಿಸಿ‘ ಎಂದು ಒತ್ತಾಯಿಸಿದ್ದರು. ಇದಕ್ಕೆ ಮನೋಹರ್ ಖಟ್ಟರ್ ಅವರು ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>