ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖಟ್ಟರ್, ಕೊರೊನಾವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ಗಮನದಲ್ಲಿಟ್ಟುಕೊಂಡು ನಾನು ಮತ್ತೊಮ್ಮೆ ರೈತ ಮುಖಂಡರಿಗೆ ಪ್ರತಿಭಟನೆಯನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡುತ್ತೇನೆ. ಈ ಬಿಕ್ಕಟ್ಟಿನ ಸಮಯದಲ್ಲಿ ಜನರಪ್ರಾಣ ಉಳಿಸುವುದು ನಮ್ಮೆಲ್ಲರ ಏಕೈಕ ಗುರಿಯಾಗಬೇಕು. ಮಾನವ ಜೀವಗಿಂತಲೂ ಮಿಗಿಲಾಗಿ ಬೇರೇನೂ ಇಲ್ಲ ಎಂದಿದ್ದಾರೆ.