<p><strong>ರೋಹ್ಟಕ್:</strong> ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ಹರಿಯಾಣದ ವ್ಯಕ್ತಿಯೊಬ್ಬರು ಜೀವನ ನಿರ್ವಹಣೆಗಾಗಿ ತರಕಾರಿ ಮಾರಾಟ ಆರಂಭಿಸಿದ್ದಾರೆ.</p>.<p>ಖಾಸಗಿ ಕಂಪೆನಿಯೊಂದರಲ್ಲಿ ಘಟಕದ ಮುಖ್ಯಸ್ಥರಾಗಿದ್ದ ರಿಂಕು ಎನ್ನುವವರು ತರಕಾರಿ ಮಾರಾಟ ಆರಂಭಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ತರಕಾರಿ ಮಾರಾಟ ಆರಂಭಿಸಬೇಕಾಯಿತು. ಖಾಸಗಿ ವಲಯವು ಸಂಕಷ್ಟಕ್ಕೆ ಸಿಲುಕಿದೆ. ಅಲ್ಲಿ ಕೆಲಸವೇ ಇಲ್ಲದಂತಾಗಿದೆ. ಹೆಚ್ಚಿನ ಆಯ್ಕೆಗಳು ಇಲ್ಲವಾದ್ದರಿಂದ ನನ್ನ ಸ್ನೇಹಿತರೂ ತರಕಾರಿ ಮಾರುತ್ತಿದ್ದಾರೆ. ಕುಟುಂಬದವರಿಗಾಗಿ ಈ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ.</p>.<p>ಮಾರ್ಚ್ ತಿಂಗಳಲ್ಲಿ ಲಾಕ್ಡೌನ್ ಆರಂಭವಾದ ಬಳಿಕ ಸಾಕಷ್ಟು ವ್ಯವಹಾರಗಳಿಗೆ ಹೊಡೆತ ಬಿದ್ದಿದೆ. ಸದ್ಯ ಲಾಕ್ಡೌನ್ ಸಡಿಲಿಸಿ, ಎಂದಿನಂತೆ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದಾಗ್ಯೂ ಪರಿಸ್ಥಿತಿ ಸುಧಾರಿಸಬೇಕಿದೆ.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 13,470 ಕೋವಿಡ್–19 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 740 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಹ್ಟಕ್:</strong> ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ಹರಿಯಾಣದ ವ್ಯಕ್ತಿಯೊಬ್ಬರು ಜೀವನ ನಿರ್ವಹಣೆಗಾಗಿ ತರಕಾರಿ ಮಾರಾಟ ಆರಂಭಿಸಿದ್ದಾರೆ.</p>.<p>ಖಾಸಗಿ ಕಂಪೆನಿಯೊಂದರಲ್ಲಿ ಘಟಕದ ಮುಖ್ಯಸ್ಥರಾಗಿದ್ದ ರಿಂಕು ಎನ್ನುವವರು ತರಕಾರಿ ಮಾರಾಟ ಆರಂಭಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ತರಕಾರಿ ಮಾರಾಟ ಆರಂಭಿಸಬೇಕಾಯಿತು. ಖಾಸಗಿ ವಲಯವು ಸಂಕಷ್ಟಕ್ಕೆ ಸಿಲುಕಿದೆ. ಅಲ್ಲಿ ಕೆಲಸವೇ ಇಲ್ಲದಂತಾಗಿದೆ. ಹೆಚ್ಚಿನ ಆಯ್ಕೆಗಳು ಇಲ್ಲವಾದ್ದರಿಂದ ನನ್ನ ಸ್ನೇಹಿತರೂ ತರಕಾರಿ ಮಾರುತ್ತಿದ್ದಾರೆ. ಕುಟುಂಬದವರಿಗಾಗಿ ಈ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ.</p>.<p>ಮಾರ್ಚ್ ತಿಂಗಳಲ್ಲಿ ಲಾಕ್ಡೌನ್ ಆರಂಭವಾದ ಬಳಿಕ ಸಾಕಷ್ಟು ವ್ಯವಹಾರಗಳಿಗೆ ಹೊಡೆತ ಬಿದ್ದಿದೆ. ಸದ್ಯ ಲಾಕ್ಡೌನ್ ಸಡಿಲಿಸಿ, ಎಂದಿನಂತೆ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದಾಗ್ಯೂ ಪರಿಸ್ಥಿತಿ ಸುಧಾರಿಸಬೇಕಿದೆ.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 13,470 ಕೋವಿಡ್–19 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 740 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>