ಬಹದೂರ್ಗಡ (ಹರಿಯಾಣ): ಕೃಷಿ ಕಾಯ್ದೆಗಳ ವಿರುದ್ಧ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮೂರಿಗೆ ತೆರಳುತ್ತಿದ್ದ ರೈತ ಮಹಿಳೆಯರ ಮೇಲೆ ಲಾರಿಯೊಂದು ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಇಲ್ಲಿನ ಪಕೋಡಾ ಚೌಕದಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.