ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಹರಡುವ ಯೂಟ್ಯೂಬ್ ಚಾನೆಲ್ ಮುಲಾಜಿಲ್ಲದೇ ಬಂದ್: ಅನುರಾಗ್ ಠಾಕೂರ್

Last Updated 20 ಜನವರಿ 2022, 7:48 IST
ಅಕ್ಷರ ಗಾತ್ರ

ನವದೆಹಲಿ: ದ್ವೇಷ ಹರಡುವ ಹಾಗೂ ರಾಷ್ಟ್ರ ವಿರೋಧಿ ಯೂಟ್ಯೂಬ್ ಚಾನೆಲ್ ಗಳನ್ನು ಮುಲಾಜಿಲ್ಲದೇ ಬಂದ್ ಮಾಡಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಗುಡುಗಿದ್ದಾರೆ.

ಕಳೆದ ತಿಂಗಳು ಬಿಪಿನ್ ರಾವತ್ ಅವರ ಬಗ್ಗೆ ತಪ್ಪು ಸುದ್ದಿಗಳನ್ನು ಬಿತ್ತರಿಸಿದ್ದು ಮತ್ತು ದೇಶ ವಿರೋಧಿ ಭಾವನೆ ಮೂಡಿಸಿವೆ ಎಂದು ಕೇಂದ್ರ ಪ್ರಸಾರ ಇಲಾಖೆ 20 ಕ್ಕೂ ಹೆಚ್ಚು ಯೂಟ್ಯೂಬ್ ಚಾನೆಲ್ ಗಳನ್ನು ಬಂದ್ ಮಾಡಲಾಗಿತ್ತು.

ಮತ್ತೆ ಈ ಬಗ್ಗೆ ಎಚ್ಚರಿಕೆ ನೀಡಿರುವ ಸಚಿವರು, ಯೂಟ್ಯೂಬ್ ಚಾನೆಲ್ ಮೂಲಕ ರಾಷ್ಟ್ರ ವಿರೋಧಿ ಕೃತ್ಯದಲ್ಲಿ ತೊಡಗಿರುವ ಹಾಗೂ ದ್ವೇಷ ಹರಡುವ ಸಂಚು ಮಾಡುವರ ಮೇಲೆ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದನ್ನು ಮುಂದುವರೆಸುತ್ತದೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ನಲ್ಲಿ ಜನರ ದಾರಿ ತಪ್ಪಿಸುವವರ ಮೇಲೆ, ಸುಳ್ಳು ಹರಡುವವರ ಮೇಲೆ ಅನೇಕ ದೇಶಗಳು ಇಂದು ಕ್ರಮ ಕೈಗೊಳ್ಳುತ್ತಿವೆ. ಯೂಟ್ಯೂಬ್ ಕೂಡ ಇಂತವರ ಮೇಲೆ ನಮ್ಮ ಮನವಿ ಪರಿಗಣಿಸಿ ಕಣ್ಣಿಟ್ಟಿರುವುದು ಸಂತಸ ತರಿಸಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆಂತರಿಕ ಭದ್ರತಾ ವಿಭಾಗದ ಸಲಹೆ ಮೇರೆಗೆ ಡಿಸೆಂಬರ್‌ನಲ್ಲಿ 20 ಕ್ಕೂ ಹೆಚ್ಚು ಯೂಟ್ಯೂಬ್ ಚಾನೆಲ್ ಗಳನ್ನು ಬಂದ್ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT