‘ಸಂತ್ರಸ್ತೆಯ ಕುಟುಂಬದ ಸದಸ್ಯರು ಹಾಗೂ ಸಾಕ್ಷಿದಾರರ ಖಾಸಗಿತನಕ್ಕೆ ಧಕ್ಕೆಯಾಗಬಾರದು ಹಾಗೂ ಅವರ ಚಲನವಲನಕ್ಕೆ ಯಾವುದೇ ನಿರ್ಬಂಧಗಳನ್ನು ಹಾಕಬಾರದು ಎಂದು ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ. ಪ್ರಕರಣದ ವಿಚಾರಣೆಗಾಗಿ ಕುಟುಂಬವು ವಕೀಲರನ್ನು ಸಂಪರ್ಕಿಸಿದೆ, ಹೀಗಿದ್ದರೂ, ಸರ್ಕಾರಿ ವಕೀಲರೂ ಕುಟುಂಬದ ಪರವಾಗಿ ಈ ಪ್ರಕರಣವನ್ನು ಕೈಗೆತ್ತಕೊಳ್ಳಬೇಕು ಎಂದು ಸಂತ್ರಸ್ತೆಯ ಸಹೋದರ ಮನವಿ ಮಾಡಿದ್ದಾರೆ’ ಎಂದು ಅಫಿಡಾವಿಟ್ನಲ್ಲಿ ಸರ್ಕಾರ ಉಲ್ಲೇಖಿಸಿದೆ.