‘ಎಸ್ಐಟಿ ತನಿಖೆ ಪೂರ್ಣಗೊಂಡಿದ್ದು, ಕೇವಲ ಮಾಧ್ಯಮದವರಿಗಷ್ಟೇ ಹಳ್ಳಿಯನ್ನು ಪ್ರವೇಶಿಸಲು ಹಾಗೂ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ‘ ಎಂದು ಜಂಟಿ ಜಿಲ್ಲಾಧಿಕಾರಿ ಪ್ರೇಮ್ ಪ್ರಕಾಶ್ ಮೀನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಜಿಲ್ಲಾಡಳಿತ ಸಂತ್ರಸ್ತೆ ಕುಟುಂಬವನ್ನು ಕೂಡಿಹಾಕಿದ್ದು, ಅವರ ಮೊಬೈಲ್ಫೋನ್ಗಳನ್ನು ವಶಪಡಿಸಿಕೊಂಡಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು.