'ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಯನ್ನು ಎಸ್ಐಟಿ ಬುಧವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಬೇಕಿತ್ತು. ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವರದಿ ಸಲ್ಲಿಕೆಗೆ ನೀಡಿದ್ದ ಗಡುವನ್ನು ಮುಂದಿನ 10 ದಿನಗಳವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ' ಎಂದು ಗೃಹ ಇಲಾಖೆಯ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಹೇಳಿದ್ದಾರೆ.