ಪಕ್ಷದ ಕಚೇರಿಯಿಂದ ನಗರದ ಗಾಂಧಿ ಪ್ರತಿಮೆ ಇರುವ ಸ್ಥಳದ ತನಕಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ಅಲ್ಲಿ ಮೌನ ವ್ರತವನ್ನು ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಪಕ್ಷದ ಕಾರ್ಯಕರ್ತರು ಹಜ್ರರತ್ಗಂಜ್ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡರ್ಗಳನ್ನು ದಾಟಿ ಒಳ ನುಗ್ಗಲು ಪ್ರವೇಶಿಸಿದಾಗ ಪೊಲೀಸರು ಅವರನ್ನು ತಡೆದರು.ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿನಡೆದಿದೆ. ಪರಿಸ್ಥಿತಿ ಹತೋಟಿಗೆ ಬರದ ಕಾರಣ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ.