<p><strong>ನವದೆಹಲಿ:</strong> ರಾಷ್ಟ್ರೀಯ ಮಹಿಳಾ ಆಯೋಗವು (ಎನ್ಸಿಡಬ್ಲ್ಯು) ಹಾಥರಸ್ ಅತ್ಯಾಚಾರ ಪ್ರಕರಣವನ್ನು ನಿಭಾಯಿಸುತ್ತಿರುವ ರೀತಿಯನ್ನು ಆಯೋಗದ ಮಾಜಿ ಅಧ್ಯಕ್ಷೆ ಮೋಹಿನಿ ಗಿರಿ ಹಾಗೂ ಮಾಜಿ ಸದಸ್ಯರಾದ ಪದ್ಮಾ ಸೇಥ್ ಮತ್ತು ಸೈದಾ ಹಮೀದ್ ಟೀಕಿಸಿದ್ದಾರೆ.</p>.<p>ಬಹಿರಂಗ ಪತ್ರ ಬರೆದಿರುವ ಅವರು, ರಾಷ್ಟ್ರೀಯ ಮಹಿಳಾ ಆಯೋಗವು ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ‘ದಿವ್ಯಮೌನ’ ತಾಳಿದೆ ಎಂದು ದೂರಿದ್ದಾರೆ.</p>.<p>‘ಆಯೋಗದ ಕಣ್ಣುಗಳು ಅಧಿಕಾರಾಸ್ಥರ ಎದುರು ಕರುಡಾಗಿವೆ. ನಾವೀಗ ನೋಡುತ್ತಿರುವುದು ಮಹಿಳಾ ಆಯೋಗದ ಕೊನೆಯ ದಿನಗಳನ್ನು. ಹಾಥರಸ್ ಘಟನೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಆಯೋಗಗಳು ನಡೆದುಕೊಂಡ ರೀತಿಯು ಇದನ್ನು ಪುಷ್ಟೀಕರಿಸುತ್ತದೆ. ದೇಶದ ನಾಗರಿಕರು ಸಂತ್ರಸ್ತೆಯ ಪರವಾಗಿ ಮಾತನಾಡುತ್ತಿದ್ದರೆ, ಈ ಎರಡೂ ಆಯೋಗಗಳ ಮುಖ್ಯಸ್ಥರು ತಮ್ಮ ಮನೆಗಳಲ್ಲಿ ಕುಳಿತು ಲೆಕ್ಕಾಚಾರ ಹಾಕಿ ಮಾತನಾಡುತ್ತಿದ್ದಾರೆ’ ಎಂದು ಪತ್ರ ಉಲ್ಲೇಖಿಸಿದೆ.</p>.<p class="Subhead">ವಜಾಕ್ಕೆ ಆಗ್ರಹ: ಉತ್ತರ ಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷೆ ವಿಮಲಾ ಬಾಥಂ ಅವರ ಮೌನವನ್ನು ಪ್ರಶ್ನಿಸಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅವರ ವಜಾಕ್ಕೆ ಆಗ್ರಹಿಸಿದ್ದಾರೆ. ಗೌತಮ್ ಬುದ್ಧ ನಗರದ ವಿಮಲಾ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.</p>.<p class="Subhead">ಅವಧಿ ವಿಸ್ತರಣೆ: ಹಾಥರಸ್ ದಲಿತ ಮಹಿಳೆಯ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಮೂವರು ಸದಸ್ಯರ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವರದಿ ಸಲ್ಲಿಸಲು 10 ದಿನ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.</p>.<p class="Subhead">ಎಎಪಿ ಶಾಸಕನ ವಿರುದ್ಧ ಪ್ರಕರಣ: ಕೋವಿಡ್ ದೃಢಪಟ್ಟಿದ್ದರೂ ಹಾಥರಸ್ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ದೆಹಲಿ ಎಎಪಿ ಶಾಸಕ ಕುಲದೀಪ್ ಕುಮಾರ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p class="Subhead">ಸಮನ್ಸ್: ಹಾಥರಸ್ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ರಂಜಿತ್ ಶ್ರೀವಾಸ್ತವ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಉತ್ತರ ನೀಡಲು ಅ.26ರಂದು ಹಾಜರಾಗುವಂತೆ ಸೂಚಿಸಲಾಗಿದೆ.</p>.<p class="Subhead">ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ: ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಸೇರಿದಂತೆ ನಾಲ್ವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಥರಸ್ಗೆ ತೆರಳುತ್ತಿದ್ದ ಇವರನ್ನು ಮಥುರಾದಲ್ಲಿ ಬಂಧಿಸಲಾಗಿತ್ತು.</p>.<p>ಪತ್ರಕರ್ತರ ಬಂಧನಕ್ಕೆ ಪ್ರೆಸ್ ಅಸೋಸಿಯೇಷನ್ ಹಾಗೂ ಭಾರತೀಯ ಮಹಿಳಾ ಪತ್ರಕರ್ತರ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಮಾಧ್ಯಮಗಳನ್ನು ಸುಮ್ಮನಾಗಿಸುವ ಉತ್ತರ ಪ್ರದೇಶ ಸರ್ಕಾರದ ಯತ್ನವನ್ನು ಖಂಡಿಸಿ, ಪತ್ರಕರ್ತರ ಬಿಡುಗಡೆಗೆ ಒತ್ತಾಯಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಮಹಿಳಾ ಆಯೋಗವು (ಎನ್ಸಿಡಬ್ಲ್ಯು) ಹಾಥರಸ್ ಅತ್ಯಾಚಾರ ಪ್ರಕರಣವನ್ನು ನಿಭಾಯಿಸುತ್ತಿರುವ ರೀತಿಯನ್ನು ಆಯೋಗದ ಮಾಜಿ ಅಧ್ಯಕ್ಷೆ ಮೋಹಿನಿ ಗಿರಿ ಹಾಗೂ ಮಾಜಿ ಸದಸ್ಯರಾದ ಪದ್ಮಾ ಸೇಥ್ ಮತ್ತು ಸೈದಾ ಹಮೀದ್ ಟೀಕಿಸಿದ್ದಾರೆ.</p>.<p>ಬಹಿರಂಗ ಪತ್ರ ಬರೆದಿರುವ ಅವರು, ರಾಷ್ಟ್ರೀಯ ಮಹಿಳಾ ಆಯೋಗವು ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ‘ದಿವ್ಯಮೌನ’ ತಾಳಿದೆ ಎಂದು ದೂರಿದ್ದಾರೆ.</p>.<p>‘ಆಯೋಗದ ಕಣ್ಣುಗಳು ಅಧಿಕಾರಾಸ್ಥರ ಎದುರು ಕರುಡಾಗಿವೆ. ನಾವೀಗ ನೋಡುತ್ತಿರುವುದು ಮಹಿಳಾ ಆಯೋಗದ ಕೊನೆಯ ದಿನಗಳನ್ನು. ಹಾಥರಸ್ ಘಟನೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಆಯೋಗಗಳು ನಡೆದುಕೊಂಡ ರೀತಿಯು ಇದನ್ನು ಪುಷ್ಟೀಕರಿಸುತ್ತದೆ. ದೇಶದ ನಾಗರಿಕರು ಸಂತ್ರಸ್ತೆಯ ಪರವಾಗಿ ಮಾತನಾಡುತ್ತಿದ್ದರೆ, ಈ ಎರಡೂ ಆಯೋಗಗಳ ಮುಖ್ಯಸ್ಥರು ತಮ್ಮ ಮನೆಗಳಲ್ಲಿ ಕುಳಿತು ಲೆಕ್ಕಾಚಾರ ಹಾಕಿ ಮಾತನಾಡುತ್ತಿದ್ದಾರೆ’ ಎಂದು ಪತ್ರ ಉಲ್ಲೇಖಿಸಿದೆ.</p>.<p class="Subhead">ವಜಾಕ್ಕೆ ಆಗ್ರಹ: ಉತ್ತರ ಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷೆ ವಿಮಲಾ ಬಾಥಂ ಅವರ ಮೌನವನ್ನು ಪ್ರಶ್ನಿಸಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅವರ ವಜಾಕ್ಕೆ ಆಗ್ರಹಿಸಿದ್ದಾರೆ. ಗೌತಮ್ ಬುದ್ಧ ನಗರದ ವಿಮಲಾ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.</p>.<p class="Subhead">ಅವಧಿ ವಿಸ್ತರಣೆ: ಹಾಥರಸ್ ದಲಿತ ಮಹಿಳೆಯ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಮೂವರು ಸದಸ್ಯರ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವರದಿ ಸಲ್ಲಿಸಲು 10 ದಿನ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.</p>.<p class="Subhead">ಎಎಪಿ ಶಾಸಕನ ವಿರುದ್ಧ ಪ್ರಕರಣ: ಕೋವಿಡ್ ದೃಢಪಟ್ಟಿದ್ದರೂ ಹಾಥರಸ್ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ದೆಹಲಿ ಎಎಪಿ ಶಾಸಕ ಕುಲದೀಪ್ ಕುಮಾರ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p class="Subhead">ಸಮನ್ಸ್: ಹಾಥರಸ್ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ರಂಜಿತ್ ಶ್ರೀವಾಸ್ತವ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಉತ್ತರ ನೀಡಲು ಅ.26ರಂದು ಹಾಜರಾಗುವಂತೆ ಸೂಚಿಸಲಾಗಿದೆ.</p>.<p class="Subhead">ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ: ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಸೇರಿದಂತೆ ನಾಲ್ವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಥರಸ್ಗೆ ತೆರಳುತ್ತಿದ್ದ ಇವರನ್ನು ಮಥುರಾದಲ್ಲಿ ಬಂಧಿಸಲಾಗಿತ್ತು.</p>.<p>ಪತ್ರಕರ್ತರ ಬಂಧನಕ್ಕೆ ಪ್ರೆಸ್ ಅಸೋಸಿಯೇಷನ್ ಹಾಗೂ ಭಾರತೀಯ ಮಹಿಳಾ ಪತ್ರಕರ್ತರ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಮಾಧ್ಯಮಗಳನ್ನು ಸುಮ್ಮನಾಗಿಸುವ ಉತ್ತರ ಪ್ರದೇಶ ಸರ್ಕಾರದ ಯತ್ನವನ್ನು ಖಂಡಿಸಿ, ಪತ್ರಕರ್ತರ ಬಿಡುಗಡೆಗೆ ಒತ್ತಾಯಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>