<p class="title"><strong>ನವದೆಹಲಿ</strong>: ‘ವಾಜಪೇಯಿ ಅವರ ಬಿಜೆಪಿಯ ಆಡಳಿತದಲ್ಲಿಬುಡಕಟ್ಟು ಜನಾಂಗದವರಿಗಾಗಿ ನನ್ನ ಎದುರಾಳಿ, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗಿಂತಲೂ ನಾನು ಹೆಚ್ಚಿನ ಕೆಲಸ ಮಾಡಿದ್ದೇನೆ. ಈ ದಾಖಲೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಗುರುವಾರ ಹೇಳಿದ್ದಾರೆ.</p>.<p class="title">ಜಾರ್ಖಂಡ್ ರಾಜ್ಯಪಾಲೆ ಸೇರಿ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ದ್ರೌಪದಿ ಮುರ್ಮು ಅವರುಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ನೀಡಿರುವ ಕೊಡುಗೆಗಳು ಏನು ಎಂದು ಅವರು ಪ್ರಶ್ನಿಸಿದರು.</p>.<p class="title">‘ನಾನು ಬುಡಕಟ್ಟು ಸಮುದಾಯದಲ್ಲಿ ಹುಟ್ಟಿಲ್ಲ ಎನ್ನುವುದನ್ನು ಬಿಟ್ಟರೆ, ವಾಜಪೇಯಿ ಸರ್ಕಾರದಲ್ಲಿ ಹಣಕಾಸು ಸಚಿವನಾಗಿದ್ದಾಗ ನಾನು ಹಿಂದುಳಿದ ಸಮುದಾಯಗಳು ಮತ್ತು ಬುಡಕಟ್ಟು ಜನಾಂಗದವರಿಗೆ ದ್ರೌಪದಿ ಅವರಿಗಿಂತಲೂ ಹೆಚ್ಚಿನ ಕೆಲಸ ಮಾಡಿರುವೆ’ ಎಂದು ಹೇಳಿದರು.</p>.<p class="title">‘ವಾಜಪೇಯಿ ಅವರ ಬಿಜೆಪಿ ಜತೆಗೆ ಈಗಿನ ಬಿಜೆಪಿಯನ್ನು ಗುರುತಿಸಲಾಗದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಾಯವಿದೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯು ಅಸ್ತಿತ್ವದ ಹೋರಾಟವಲ್ಲ, ಆದರೆ, ಸಿದ್ಧಾಂತದ ಹೋರಾಟವಾಗಿದೆ’ ಎಂದು ಸಿನ್ಹಾ ಹೇಳಿದ್ದಾರೆ.</p>.<p class="title">‘ಜೂನ್ 27ರಂದು ನಾಪಪತ್ರ ಸಲ್ಲಿಸಿದ ನಂತರ ಎಲ್ಲ ಪಕ್ಷಗಳ ನಾಯಕರನ್ನು ಮತ್ತು ಸಂಸದರನ್ನು ಭೇಟಿಯಾಗಿ, ಬೆಂಬಲ ಕೋರುವೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ‘ವಾಜಪೇಯಿ ಅವರ ಬಿಜೆಪಿಯ ಆಡಳಿತದಲ್ಲಿಬುಡಕಟ್ಟು ಜನಾಂಗದವರಿಗಾಗಿ ನನ್ನ ಎದುರಾಳಿ, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗಿಂತಲೂ ನಾನು ಹೆಚ್ಚಿನ ಕೆಲಸ ಮಾಡಿದ್ದೇನೆ. ಈ ದಾಖಲೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಗುರುವಾರ ಹೇಳಿದ್ದಾರೆ.</p>.<p class="title">ಜಾರ್ಖಂಡ್ ರಾಜ್ಯಪಾಲೆ ಸೇರಿ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ದ್ರೌಪದಿ ಮುರ್ಮು ಅವರುಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ನೀಡಿರುವ ಕೊಡುಗೆಗಳು ಏನು ಎಂದು ಅವರು ಪ್ರಶ್ನಿಸಿದರು.</p>.<p class="title">‘ನಾನು ಬುಡಕಟ್ಟು ಸಮುದಾಯದಲ್ಲಿ ಹುಟ್ಟಿಲ್ಲ ಎನ್ನುವುದನ್ನು ಬಿಟ್ಟರೆ, ವಾಜಪೇಯಿ ಸರ್ಕಾರದಲ್ಲಿ ಹಣಕಾಸು ಸಚಿವನಾಗಿದ್ದಾಗ ನಾನು ಹಿಂದುಳಿದ ಸಮುದಾಯಗಳು ಮತ್ತು ಬುಡಕಟ್ಟು ಜನಾಂಗದವರಿಗೆ ದ್ರೌಪದಿ ಅವರಿಗಿಂತಲೂ ಹೆಚ್ಚಿನ ಕೆಲಸ ಮಾಡಿರುವೆ’ ಎಂದು ಹೇಳಿದರು.</p>.<p class="title">‘ವಾಜಪೇಯಿ ಅವರ ಬಿಜೆಪಿ ಜತೆಗೆ ಈಗಿನ ಬಿಜೆಪಿಯನ್ನು ಗುರುತಿಸಲಾಗದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಾಯವಿದೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯು ಅಸ್ತಿತ್ವದ ಹೋರಾಟವಲ್ಲ, ಆದರೆ, ಸಿದ್ಧಾಂತದ ಹೋರಾಟವಾಗಿದೆ’ ಎಂದು ಸಿನ್ಹಾ ಹೇಳಿದ್ದಾರೆ.</p>.<p class="title">‘ಜೂನ್ 27ರಂದು ನಾಪಪತ್ರ ಸಲ್ಲಿಸಿದ ನಂತರ ಎಲ್ಲ ಪಕ್ಷಗಳ ನಾಯಕರನ್ನು ಮತ್ತು ಸಂಸದರನ್ನು ಭೇಟಿಯಾಗಿ, ಬೆಂಬಲ ಕೋರುವೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>