ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

Last Updated 15 ನವೆಂಬರ್ 2021, 8:46 IST
ಅಕ್ಷರ ಗಾತ್ರ

ಲಖನೌ: ಪಕ್ಷದ ಕಾರ್ಯಕರ್ತರು ದಲಿತರೊಂದಿಗೆ ಚಹಾ ಸೇವಿಸಿ, ಅವರು ಬಿಜೆಪಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದುಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಕರೆ ನೀಡಿದ್ದಾರೆ.

403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ.

ಭಾನುವಾರ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ (ಇತರೆ ಹಿಂದುಳಿದ ವರ್ಗಗಳ ಸಾಮಾಜಿಕ ಪ್ರತಿನಿಧಿ ಸಮ್ಮೇಳನ ಮತ್ತು ವೈಶ್ಯ ವ್ಯಾಪಾರಿ ಸಮ್ಮೇಳನದಲ್ಲಿ) ಭಾಗವಹಿಸಿದ ಸಿಂಗ್, ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದರು.

‘ನೂರು ದಲಿತರೊಂದಿಗೆ ಚಹಾ ಸೇವಿಸಿ. ಮತ ಚಲಾಯಿಸಬೇಕಿರುವುದು ರಾಷ್ಟ್ರೀಯತೆಯ ಆಧಾರದಲ್ಲಿ. ಜಾತಿ, ಹಣ ಅಥವಾ ಧರ್ಮದ ಆಧಾರದಲ್ಲಿ ಅಲ್ಲ ಎಂಬುದನ್ನುಅವರಿಗೆ ಮನವರಿಕೆ ಮಾಡಬೇಕು.ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ನಾಯಕಿ ಪ‍್ರಿಯಾಂಕಾ ಗಾಂಧಿ ಟೀಕಿಸಿದ್ದರು. ಅದರ ಬೆನ್ನಲ್ಲೇ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT