ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ರಾಜೀವ್ ಸಹಾಯ್ ಎಂಡ್ಲಾ ಹಾಗೂ ಆಶಾ ಮೆನನ್ ಅವರಿರುವ ನ್ಯಾಯಪೀಠ, ‘ಇಬ್ಬರನ್ನೂ ಒಂದೇ ಸ್ಥಳಕ್ಕೆ ವರ್ಗಾವಣೆ ಮಾಡಬೇಕು ಎಂದು ಕೋರಿ ಅಮಿತ್ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲು ಸೇನೆ ಸೂಕ್ತ ಕಾರಣಗಳನ್ನು ನೀಡಿದೆ. ಕೋರ್ಟ್ ಮಧ್ಯಪ್ರವೇಶಿಸಬಹುದಾದಂತಹ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ’ ಎಂದು ಅಭಿಪ್ರಾಯಪಟ್ಟಿತು.