<p><strong>ಮುಂಬೈ: </strong>ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ರಾಜ್ಯದ ಆರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಪ್ರತಿ ಎಫ್ಐಆರ್ಗೆ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಕೇಂದ್ರ ಸಚಿವ ನಾರಾಯಣ್ ರಾಣೆ ಅವರಿಗೆ ತಿಳಿಸಿದೆ.</p>.<p>ಸಚಿವ ರಾಣೆ ಅವರು ತಮ್ಮ ವಿರುದ್ಧ ಮಹದ್, ನಾಸಿಕ್, ಪುಣೆ, ಥಾಣೆ, ಜಲಗಾಂವ್ ಮತ್ತು ಅಹ್ಮದ್ನಗರದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಒಂದು ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಮಾದಾರ್ ಅವರ ವಿಭಾಗೀಯ ಪೀಠ, ‘ಪ್ರತಿ ಎಫ್ಐಆರ್ಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದರೆ ಉತ್ತಮ‘ ಎಂದು ಹೇಳಿತು.</p>.<p>ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ಗಳು ದಾಖಲಾಗಿವೆ. ಹಾಗಾಗಿ ಪ್ರತ್ಯೇಕ ಅರ್ಜಿ ಸಲ್ಲಿಸುವುದು ಸೂಕ್ತ. ಇದರಿಂದ ಪ್ರತಿ ಠಾಣೆಯಿಂದಲೂ ಪ್ರತಿಕ್ರಿಯೆ ಪಡೆಯಲು ಸುಲಭವಾಗುತ್ತದೆ ಎಂದು ಪೀಠ ತಿಳಿಸಿತು</p>.<p>ಇದಕ್ಕೆ ಒಪ್ಪಿದ ರಾಣೆ ಪರ ವಕೀಲರಾದ ಅಶೋಕ್ ಮುಂಡರಗಿ ಮತ್ತು ಅನಿಕೇತ್ ನಿಕಮ್, ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸುವುದಾಗಿ ಹೇಳಿದರು. ಇದೇ ವೇಳೆ ಎಲ್ಲ ಪ್ರಕರಣಗಳಿಂದಲೂ ಮಧ್ಯಂತರ ರಕ್ಷಣೆಯನ್ನು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ರಾಜ್ಯದ ಆರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಪ್ರತಿ ಎಫ್ಐಆರ್ಗೆ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಕೇಂದ್ರ ಸಚಿವ ನಾರಾಯಣ್ ರಾಣೆ ಅವರಿಗೆ ತಿಳಿಸಿದೆ.</p>.<p>ಸಚಿವ ರಾಣೆ ಅವರು ತಮ್ಮ ವಿರುದ್ಧ ಮಹದ್, ನಾಸಿಕ್, ಪುಣೆ, ಥಾಣೆ, ಜಲಗಾಂವ್ ಮತ್ತು ಅಹ್ಮದ್ನಗರದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಒಂದು ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಮಾದಾರ್ ಅವರ ವಿಭಾಗೀಯ ಪೀಠ, ‘ಪ್ರತಿ ಎಫ್ಐಆರ್ಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದರೆ ಉತ್ತಮ‘ ಎಂದು ಹೇಳಿತು.</p>.<p>ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ಗಳು ದಾಖಲಾಗಿವೆ. ಹಾಗಾಗಿ ಪ್ರತ್ಯೇಕ ಅರ್ಜಿ ಸಲ್ಲಿಸುವುದು ಸೂಕ್ತ. ಇದರಿಂದ ಪ್ರತಿ ಠಾಣೆಯಿಂದಲೂ ಪ್ರತಿಕ್ರಿಯೆ ಪಡೆಯಲು ಸುಲಭವಾಗುತ್ತದೆ ಎಂದು ಪೀಠ ತಿಳಿಸಿತು</p>.<p>ಇದಕ್ಕೆ ಒಪ್ಪಿದ ರಾಣೆ ಪರ ವಕೀಲರಾದ ಅಶೋಕ್ ಮುಂಡರಗಿ ಮತ್ತು ಅನಿಕೇತ್ ನಿಕಮ್, ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸುವುದಾಗಿ ಹೇಳಿದರು. ಇದೇ ವೇಳೆ ಎಲ್ಲ ಪ್ರಕರಣಗಳಿಂದಲೂ ಮಧ್ಯಂತರ ರಕ್ಷಣೆಯನ್ನು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>