<p class="title"><strong>ನವದೆಹಲಿ (ಪಿಟಿಐ</strong>): ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರ ವಿರುದ್ಧ ದಾಖಲಿಸಿರುವ ಪ್ರಕರಣದ ಎಫ್ಐಆರ್ ಪ್ರತಿ ಕೋರಿದ್ದ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ದಾಖಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ)ದೆಹಲಿ ಹೈಕೋರ್ಟ್ ಸೂಚಿಸಿದೆ.</p>.<p class="title">ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿತ್ತಾಯ ಅವರು ಶುಕ್ರವಾರ ಈ ಕುರಿತು ಎನ್ಐಎಗೆ ನೋಟಿಸ್ ಜಾರಿ ಮಾಡಿದರು. ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಚೆನ್ನೈನ ಮೊಹಮ್ಮದ್ ಯೂಸೂಫ್ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.</p>.<p>ಪ್ರಕರಣದಲ್ಲಿ ವಾದ ಮಂಡಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಅನಾರೋಗ್ಯವಿದೆ. ಹೀಗಾಗಿ, ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ನಿಗದಿಪಡಿಸಬೇಕು ಎಂದು ಎನ್ಐಎ ಪರ ಹಾಜರಿದ್ದ ವಕೀಲರು ಮನವಿ ಮಾಡಿದರು.</p>.<p>ವಕೀಲ ವೃತ್ತಿ ತರಬೇತಿ ಪಡೆಯುತ್ತಿರುವ ಅರ್ಜಿದಾರ ಯೂಸೂಫ್, ತನ್ನ ವಿರುದ್ಧ ದಾಖಲಿಸಿರುವ ಪ್ರಕರಣ ಸಂಬಂಧ ಎಫ್ಐಆರ್ ಪ್ರತಿ ನೀಡಬೇಕು. ಅಲ್ಲದೆ ಈ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲರಿಗೂ ಎಫ್ಐಆರ್ ಪ್ರತಿ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ</strong>): ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರ ವಿರುದ್ಧ ದಾಖಲಿಸಿರುವ ಪ್ರಕರಣದ ಎಫ್ಐಆರ್ ಪ್ರತಿ ಕೋರಿದ್ದ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ದಾಖಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ)ದೆಹಲಿ ಹೈಕೋರ್ಟ್ ಸೂಚಿಸಿದೆ.</p>.<p class="title">ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿತ್ತಾಯ ಅವರು ಶುಕ್ರವಾರ ಈ ಕುರಿತು ಎನ್ಐಎಗೆ ನೋಟಿಸ್ ಜಾರಿ ಮಾಡಿದರು. ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಚೆನ್ನೈನ ಮೊಹಮ್ಮದ್ ಯೂಸೂಫ್ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.</p>.<p>ಪ್ರಕರಣದಲ್ಲಿ ವಾದ ಮಂಡಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಅನಾರೋಗ್ಯವಿದೆ. ಹೀಗಾಗಿ, ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ನಿಗದಿಪಡಿಸಬೇಕು ಎಂದು ಎನ್ಐಎ ಪರ ಹಾಜರಿದ್ದ ವಕೀಲರು ಮನವಿ ಮಾಡಿದರು.</p>.<p>ವಕೀಲ ವೃತ್ತಿ ತರಬೇತಿ ಪಡೆಯುತ್ತಿರುವ ಅರ್ಜಿದಾರ ಯೂಸೂಫ್, ತನ್ನ ವಿರುದ್ಧ ದಾಖಲಿಸಿರುವ ಪ್ರಕರಣ ಸಂಬಂಧ ಎಫ್ಐಆರ್ ಪ್ರತಿ ನೀಡಬೇಕು. ಅಲ್ಲದೆ ಈ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲರಿಗೂ ಎಫ್ಐಆರ್ ಪ್ರತಿ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>