ಮದುರೈನ ಸಿಪಿಎಂ ಪಕ್ಷದ ಸಂಸದ ಸು. ವೆಂಕಟೇಶನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಕಿರುಬಕಾರನ್ ಮತ್ತು ಎಂ. ದುರೈಸ್ವಾಮಿ ಅವರನ್ನೊಳಗೊಂಡ ಪೀಠವು, ‘ಸಂವಿಧಾನದ ಅನ್ವಯ, ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶ ಅಥವಾ ರಾಜ್ಯದಲ್ಲಿ ಬಳಸುವ ಯಾವುದೇ ಭಾಷೆಯಲ್ಲಿ ಸರ್ಕಾರಕ್ಕೆ ಪತ್ರ ಬರೆಯುವ ಹಕ್ಕು ಹೊಂದಿರುತ್ತಾರೆ‘ ಎಂದು ಹೇಳಿದೆ. ಇದೇ ವೇಳೆ ಅಧಿಕೃತ ಭಾಷಾ ಕಾಯ್ದೆಯನ್ನು ಉಲ್ಲೇಖಿಸಿದ ನ್ಯಾಯಪೀಠ, ‘ಈ ಕಾಯ್ದೆ ಕೂಡ ಇದನ್ನೇ ಹೇಳುತ್ತದೆ‘ ಎಂದು ತಿಳಿಸಿದೆ.