ನ್ಯಾಯಮೂರ್ತಿಗಳಾದ ಎಸ್ ಜೆ ಕಥವಲ್ಲಾ ಮತ್ತು ಆರ್ ಐ ಚಾಗ್ಲಾ ಅವರನ್ನು ಒಳಗೊಂಡ ನ್ಯಾಯಪೀಠವು ಕಳೆದ ವಾರ ಮನವಿಯ ವಿಚಾರಣೆಯನ್ನು ನಡೆಸಿತ್ತು.
ಪಾಲಿ ಹಿಲ್ ಪ್ರದೇಶದಲ್ಲಿನ ತನ್ನ ಬಂಗಲೆಯ ಒಂದು ಭಾಗವನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನೆಲಸಮಗೊಳಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9 ರಂದು ರನೌತ್ ಅವರು ಹೈಕೋರ್ಟ್ ಮಟ್ಟಿಲೇರಿದ್ದರು. ಕಟ್ಟಡ ಧ್ವಂಸ ಮಾಡಿದ ಬಿಎಂಸಿಯ ನಡೆ ಕಾನೂನು ಬಾಹಿರ ಎಂದು ಘೋಷಿಸಬೇಕೆಂದೂ, ತಮಗೆ ₹2 ಕೋಟಿ ಪರಿಹಾರ ನೀಡುವಂತೆ ಬಿಎಂಸಿಗೆ ಸೂಚನೆ ನೀಡಬೇಕು ಎಂದೂ ಹೈಕೋರ್ಟ್ಗೆ ರನೌತ್ ಮನವಿ ಮಾಡಿದ್ದರು.