<p><strong>ಮುಂಬೈ</strong>: ಮುಂಬೈನಲ್ಲಿ ಫೋಟೊ ಜರ್ನಲಿಸ್ಟ್ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಬಾಂಬೆ ಹೈಕೋರ್ಟ್ ಗುರುವಾರ ಆದೇಶಿಸಿತು.</p>.<p>ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಸಾಧನಾ ಜಾಧವ್ ಹಾಗೂ ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಅಪರಾಧಿಗಳು ತಾವು ಎಸಗಿದ ಕೃತ್ಯಕ್ಕಾಗಿ ಬದುಕಿರುವವರೆಗೆ ಪಶ್ಚಾತ್ತಾಪ ಪಡಬೇಕು’ ಎಂದು ಹೇಳಿತು.</p>.<p>ವಿಜಯ್ ಜಾಧವ್, ಮೊಹಮ್ಮದ್ ಕಾಸಿಮ್ ಶೇಖ್ ಹಾಗೂ ಮೊಹಮ್ಮದ್ ಅನ್ಸಾರಿ ಅಪರಾಧಿಗಳು.</p>.<p>‘ಅತ್ಯಾಚಾರ ಎಂಬುದು ಮಾನವ ಹಕ್ಕುಗಳ ಉಲ್ಲಂಘನೆ. ಈ ಮೂವರು ಎಸಗಿದ ಕೃತ್ಯ ಸಮಾಜದ ಆತ್ಮಸಾಕ್ಷಿಯನ್ನೇ ಅಲುಗಾಡಿಸಿತ್ತು. ಆದರೆ, ಅಪರಾಧಿಗಳನ್ನು ಗಲ್ಲಿಗೇರಿಸಿದರೆ ಅದು ಪಶ್ಚಾತ್ತಾಪ ಪಡುವ ಅವಕಾಶಕ್ಕೆ ಅಂತ್ಯ ಹಾಡಿದಂತೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>ಮುಂಬೈನಲ್ಲಿರುವ ಶಕ್ತಿ ಮಿಲ್ಸ್ನ ಆವರಣದಲ್ಲಿ 2013ರ ಆಗಸ್ಟ್ 22ರಂದು ಈ ಮೂವರು, 22 ವರ್ಷದ ಫೋಟೊ ಜರ್ನಲಿಸ್ಟ್ ಮೇಲೆ ಅತ್ಯಾಚಾರ ಎಸಗಿದ್ದರು.</p>.<p>ವಿಚಾರಣಾ ಕೋರ್ಟ್ ಈ ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ 2014ರ ಮಾರ್ಚ್ನಲ್ಲಿ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಂಬೈನಲ್ಲಿ ಫೋಟೊ ಜರ್ನಲಿಸ್ಟ್ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಬಾಂಬೆ ಹೈಕೋರ್ಟ್ ಗುರುವಾರ ಆದೇಶಿಸಿತು.</p>.<p>ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಸಾಧನಾ ಜಾಧವ್ ಹಾಗೂ ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಅಪರಾಧಿಗಳು ತಾವು ಎಸಗಿದ ಕೃತ್ಯಕ್ಕಾಗಿ ಬದುಕಿರುವವರೆಗೆ ಪಶ್ಚಾತ್ತಾಪ ಪಡಬೇಕು’ ಎಂದು ಹೇಳಿತು.</p>.<p>ವಿಜಯ್ ಜಾಧವ್, ಮೊಹಮ್ಮದ್ ಕಾಸಿಮ್ ಶೇಖ್ ಹಾಗೂ ಮೊಹಮ್ಮದ್ ಅನ್ಸಾರಿ ಅಪರಾಧಿಗಳು.</p>.<p>‘ಅತ್ಯಾಚಾರ ಎಂಬುದು ಮಾನವ ಹಕ್ಕುಗಳ ಉಲ್ಲಂಘನೆ. ಈ ಮೂವರು ಎಸಗಿದ ಕೃತ್ಯ ಸಮಾಜದ ಆತ್ಮಸಾಕ್ಷಿಯನ್ನೇ ಅಲುಗಾಡಿಸಿತ್ತು. ಆದರೆ, ಅಪರಾಧಿಗಳನ್ನು ಗಲ್ಲಿಗೇರಿಸಿದರೆ ಅದು ಪಶ್ಚಾತ್ತಾಪ ಪಡುವ ಅವಕಾಶಕ್ಕೆ ಅಂತ್ಯ ಹಾಡಿದಂತೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>ಮುಂಬೈನಲ್ಲಿರುವ ಶಕ್ತಿ ಮಿಲ್ಸ್ನ ಆವರಣದಲ್ಲಿ 2013ರ ಆಗಸ್ಟ್ 22ರಂದು ಈ ಮೂವರು, 22 ವರ್ಷದ ಫೋಟೊ ಜರ್ನಲಿಸ್ಟ್ ಮೇಲೆ ಅತ್ಯಾಚಾರ ಎಸಗಿದ್ದರು.</p>.<p>ವಿಚಾರಣಾ ಕೋರ್ಟ್ ಈ ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ 2014ರ ಮಾರ್ಚ್ನಲ್ಲಿ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>