ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದುಕೊರತೆ ಅಧಿಕಾರಿ ನೇಮಕದ ಬಗ್ಗೆ ಜು.8ರೊಳಗೆ ತಿಳಿಸಿ: ಹೈಕೋರ್ಟ್‌ ಸೂಚನೆ

Last Updated 6 ಜುಲೈ 2021, 10:04 IST
ಅಕ್ಷರ ಗಾತ್ರ

ನವದೆಹಲಿ: ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ಭಾರತದಲ್ಲಿ ಗ್ರಾಹಕರ ಕುಂದುಕೊರತೆ ಅಧಿಕಾರಿಯನ್ನು (ಆರ್‌ಜಿಒ) ಯಾವಾಗ ನೇಮಕ ಮಾಡಲಾಗುವುದು ಎಂಬ ಬಗ್ಗೆ ಜುಲೈ 8ರೊಳಗೆ ತಿಳಿಸುವಂತೆ ಟ್ವಿಟರ್‌ಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಸೂಚಿಸಿದೆ.

ಕುಂದುಕೊರತೆ ಅಧಿಕಾರಿ ನೇಮಕದ ಕಾರ್ಯ ಪ್ರಗತಿಯಲ್ಲಿದೆ ಎಂದು ಟ್ವಿಟರ್‌ ಹೇಳಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯವು ಈ ಸೂಚನೆ ನೀಡಿದೆ.

ಈ ಹಿಂದೆ ಮಧ್ಯಂತರ ಅವಧಿಗೆ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಾಗಿತ್ತು. ಆದರೆ, ಅವರು ಈಗಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT