<p><strong>ಲಖನೌ (ಪಿಟಿಐ);</strong>ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>ಅಯೋಧ್ಯೆ ನಿವಾಸಿಗಳಾದ ಹಾಜಿ ಮಹಮೂದ್ ಅಹ್ಮದ್ ಮತ್ತು ಸೈಯದ್ ಅಖ್ಲಾಕ್ ಅಹ್ಮದ್ ಸಲ್ಲಿಸಿದ ಮನವಿ ಮೇರೆಗೆ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಪೀಠ ಈ ಆದೇಶ ನೀಡಿದೆ.</p>.<p>ಉತ್ತರ ಪ್ರದೇಶದ ಅಂದಿನ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಂ.ಎಂ.ಜೋಶಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಾಧ್ವಿ ರಿತಂಭರಾ ಅವರು ಖುಲಾಸೆಗೊಂಡ ಇತರೆ ನಾಯಕರು.</p>.<p>ವಿವಾದಿತ ಕಟ್ಟಡವನ್ನು ಕೆಡವಿದ ಆರೋಪಿಗಳು ಮತ್ತು ಸಂತ್ರಸ್ತರ ವಿರುದ್ಧದ ವಿಚಾರಣೆಯಲ್ಲಿ ತಾವು ಸಾಕ್ಷಿಗಳಾಗಿದ್ದೇವೆ ಎಂದು ಇಬ್ಬರೂ ಅರ್ಜಿಯಲ್ಲಿ ವಾದಿಸಿದ್ದರು.</p>.<p>ಇಬ್ಬರು ಅರ್ಜಿದಾರರು ಈ ಪ್ರಕರಣದಲ್ಲಿ ದೂರುದಾರರು ಅಥವಾ ಸಂತ್ರಸ್ತರಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಅಪರಿಚಿತರಂತೆ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ ಎಂದುರಾಜ್ಯ ಸರ್ಕಾರ ಮತ್ತು ಸಿಬಿಐ ತನ್ನ ಆಕ್ಷೇಪಣೆಯಲ್ಲಿ ಒತ್ತಿ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಪಿಟಿಐ);</strong>ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>ಅಯೋಧ್ಯೆ ನಿವಾಸಿಗಳಾದ ಹಾಜಿ ಮಹಮೂದ್ ಅಹ್ಮದ್ ಮತ್ತು ಸೈಯದ್ ಅಖ್ಲಾಕ್ ಅಹ್ಮದ್ ಸಲ್ಲಿಸಿದ ಮನವಿ ಮೇರೆಗೆ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಪೀಠ ಈ ಆದೇಶ ನೀಡಿದೆ.</p>.<p>ಉತ್ತರ ಪ್ರದೇಶದ ಅಂದಿನ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಂ.ಎಂ.ಜೋಶಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಾಧ್ವಿ ರಿತಂಭರಾ ಅವರು ಖುಲಾಸೆಗೊಂಡ ಇತರೆ ನಾಯಕರು.</p>.<p>ವಿವಾದಿತ ಕಟ್ಟಡವನ್ನು ಕೆಡವಿದ ಆರೋಪಿಗಳು ಮತ್ತು ಸಂತ್ರಸ್ತರ ವಿರುದ್ಧದ ವಿಚಾರಣೆಯಲ್ಲಿ ತಾವು ಸಾಕ್ಷಿಗಳಾಗಿದ್ದೇವೆ ಎಂದು ಇಬ್ಬರೂ ಅರ್ಜಿಯಲ್ಲಿ ವಾದಿಸಿದ್ದರು.</p>.<p>ಇಬ್ಬರು ಅರ್ಜಿದಾರರು ಈ ಪ್ರಕರಣದಲ್ಲಿ ದೂರುದಾರರು ಅಥವಾ ಸಂತ್ರಸ್ತರಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಅಪರಿಚಿತರಂತೆ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ ಎಂದುರಾಜ್ಯ ಸರ್ಕಾರ ಮತ್ತು ಸಿಬಿಐ ತನ್ನ ಆಕ್ಷೇಪಣೆಯಲ್ಲಿ ಒತ್ತಿ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>