ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಮತ್ತು ಎಂ.ಎನ್. ಜಾಧವ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ‘ಆನಂದ್ ವಿರುದ್ಧ ಮಾಡಿರುವ ಆರೋಪದ ಪ್ರಕಾರ ಭಯೋತ್ಪಾದನೆ ಸಂಘಟನೆಗಳೊಂದಿಗೆ ಸಂಪರ್ಕ ಮತ್ತು ಅದಕ್ಕೆ ಬೆಂಬಲ ನೀಡಿರುವುದಕ್ಕೆ ಸಂಬಂಧಿಸಿದ ಒಂದೇ ಪ್ರಕರಣವಿದೆ. ಇದಕ್ಕೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಇದೆ. ಆರೋಪಿಯು ಈಗಾಗಲೇ ಎರಡು ವರ್ಷ ಜೈಲಿನಲ್ಲಿ ಕಳೆದಿದ್ದಾರೆ ಎಂಬುದನ್ನು ಗಮನಿಸಲಾಗಿದೆ’ ಎಂದು ತಿಳಿಸಿದೆ.