ನ್ಯಾಯಮೂರ್ತಿ ಸುರೇಶ್ ಕುಮಾರ್ ಅವರು ಪ್ರಕರಣದ ವಿಚಾರಣೆಯನ್ನು ಮೇ 18ಕ್ಕೆ ನಿಗದಿಪಡಿಸಿದರು. ಹಿರಿಯ ವಕೀಲರಾದ ಆರ್.ಎಸ್.ಚೀಮಾ ಮತ್ತು ತನನ್ನುಮ್ ಚೀಮಾ ಕಾಂಗ್ರೆಸ್ ಮುಖಂಡರ ಪರವಾಗಿ ಹಾಜರಿದ್ದು, ‘ಕೋವಿಡ್ ಕಾರಣದಿಂದ ಅವರ ಕಚೇರಿ ಮುಚ್ಚಿದ್ದು, ಪ್ರತಿಕ್ರಿಯೆ ದಾಖಲಿಸಲು ಆಗಿಲ್ಲ. ಇನ್ನಷ್ಟು ಸಮಯ ನೀಡಬೇಕು’ ಎಂದು ಮನವಿ ಮಾಡಿದರು.