ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿ ಮತ್ತು ಹೈಕೋರ್ಟ್ನ ಆದೇಶದಲ್ಲಿ ಉಲ್ಲೇಖಿಸಿ ಮಾತನಾಡಿ, ‘ಈ ವರದಿ ಮತ್ತು ಆದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೆಲುವು ಸಾಧಿಸಿದ ನಂತರ ರಾಜ್ಯದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಜನರು ನೀಡಿದ ದೂರುಗಳನ್ನು ರಾಜ್ಯ ಪೊಲೀಸರು ಆಲಿಸಲಿಲ್ಲ. ರಾಜ್ಯ ಸರ್ಕಾರ ಕೂಡ ಹಿಂಸಾಚಾರದಲ್ಲಿ ಭಾಗಿಯಾದ ಅಪರಾಧಿಗಳಿಗೆ ರಕ್ಷಣೆ ಒದಗಿಸಿರುವುದಾಗಿ ಉಲ್ಲೇಖಿಸಲಾಗಿದೆ‘ ಎಂದರು. ಅದೇ ರೀತಿ, ಈ ಪ್ರಕರಣಗಳ ಆರೋಪಿಗಳು ತೃಣಮೂಲ ಕಾಂಗ್ರೆಸ್ನವರೇ ಆಗಿರುತ್ತಾರೆ ಎಂದು ಆರೋಪಿಸಿದರು.