<p class="title"><strong>ಬಿಲಾಸ್ಪುರ</strong>: ಛತ್ತೀಸ್ಗಢ ಸರ್ಕಾರವು ರಾಜ್ಯದ ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಪ್ರಯೋಗಾಲಯದ ಸಹಾಯಕರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 100ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನೀಡಿರುವ ಜಾಹೀರಾತನ್ನು ಛತ್ತೀಸ್ಗಢ ಹೈಕೋರ್ಟ್ ಅಸಾಂವಿಧಾನಿಕ ಎಂದು ಹೇಳಿದೆ. </p>.<p class="title">ಮುಖ್ಯ ನ್ಯಾಯಮೂರ್ತಿ ಅರುಪ್ ಕುಮಾರ್ ಗೋಸ್ವಾಮಿ ಹಾಗೂ ನ್ಯಾಯಮೂರ್ತಿ ನರೇಂದ್ರ ಕುಮಾರ್ ವ್ಯಾಸ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಪ್ರಯೋಗಾಲಯದ ಸಹಾಯಕರು ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರು ಮಾತ್ರ ನೇರ ನೇಮಕಾತಿಗೆ ಅರ್ಹರು ಎಂದು ಹೇಳಿರುವ ಛತ್ತೀಸ್ಗಢ ವೈದ್ಯಕೀಯ ಶಿಕ್ಷಣ (ಗೆಜೆಟೆಡ್) ಸೇವಾ ನೇಮಕಾತಿ ನಿಯಮಗಳು–2013ರ ಶೆಡ್ಯೂಲ್ 3ರಲ್ಲಿನ ನಿಬಂಧನೆಯನ್ನು ರದ್ದುಗೊಳಿಸಿ ಆದೇಶ ನೀಡಿದೆ.</p>.<p class="bodytext">ಛತ್ತೀಸ್ಗಢ ಸರ್ಕಾರವು ನೀಡಿದ್ದ ಜಾಹೀರಾತನ್ನು ಪ್ರಶ್ನಿಸಿ ಅಭಯ್ ಕುಮಾರ್ ಕಿಸ್ಪೊಟ್ಟಾ, ಡಾ. ಅಜಯ್ ತ್ರಿಪಾಠಿ, ಅಲಿಯುಸ್ ಕ್ಯಾಲ್ಕ್ಸ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಅಲಿಸಿದ ನ್ಯಾಯಪೀಠವು ಗುರುವಾರ ಆದೇಶ ನೀಡಿದೆ ಎಂದು ಅರ್ಜಿದಾರರ ವಕೀಲರಾದ ಘನಶ್ಯಾಮ್ ಕಶ್ಯಪ್ ಮತ್ತು ನೆಲ್ಸನ್ ಪನ್ನಾ ಶನಿವಾರ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬಿಲಾಸ್ಪುರ</strong>: ಛತ್ತೀಸ್ಗಢ ಸರ್ಕಾರವು ರಾಜ್ಯದ ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಪ್ರಯೋಗಾಲಯದ ಸಹಾಯಕರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 100ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನೀಡಿರುವ ಜಾಹೀರಾತನ್ನು ಛತ್ತೀಸ್ಗಢ ಹೈಕೋರ್ಟ್ ಅಸಾಂವಿಧಾನಿಕ ಎಂದು ಹೇಳಿದೆ. </p>.<p class="title">ಮುಖ್ಯ ನ್ಯಾಯಮೂರ್ತಿ ಅರುಪ್ ಕುಮಾರ್ ಗೋಸ್ವಾಮಿ ಹಾಗೂ ನ್ಯಾಯಮೂರ್ತಿ ನರೇಂದ್ರ ಕುಮಾರ್ ವ್ಯಾಸ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಪ್ರಯೋಗಾಲಯದ ಸಹಾಯಕರು ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರು ಮಾತ್ರ ನೇರ ನೇಮಕಾತಿಗೆ ಅರ್ಹರು ಎಂದು ಹೇಳಿರುವ ಛತ್ತೀಸ್ಗಢ ವೈದ್ಯಕೀಯ ಶಿಕ್ಷಣ (ಗೆಜೆಟೆಡ್) ಸೇವಾ ನೇಮಕಾತಿ ನಿಯಮಗಳು–2013ರ ಶೆಡ್ಯೂಲ್ 3ರಲ್ಲಿನ ನಿಬಂಧನೆಯನ್ನು ರದ್ದುಗೊಳಿಸಿ ಆದೇಶ ನೀಡಿದೆ.</p>.<p class="bodytext">ಛತ್ತೀಸ್ಗಢ ಸರ್ಕಾರವು ನೀಡಿದ್ದ ಜಾಹೀರಾತನ್ನು ಪ್ರಶ್ನಿಸಿ ಅಭಯ್ ಕುಮಾರ್ ಕಿಸ್ಪೊಟ್ಟಾ, ಡಾ. ಅಜಯ್ ತ್ರಿಪಾಠಿ, ಅಲಿಯುಸ್ ಕ್ಯಾಲ್ಕ್ಸ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಅಲಿಸಿದ ನ್ಯಾಯಪೀಠವು ಗುರುವಾರ ಆದೇಶ ನೀಡಿದೆ ಎಂದು ಅರ್ಜಿದಾರರ ವಕೀಲರಾದ ಘನಶ್ಯಾಮ್ ಕಶ್ಯಪ್ ಮತ್ತು ನೆಲ್ಸನ್ ಪನ್ನಾ ಶನಿವಾರ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>