ಮುಂಬೈ: ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶಮುಖ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಅನಿಲ್ ದೇಶಮುಖ್ ಸಲ್ಲಿಸಿರುವ ಮನವಿ ಅರ್ಜಿಯು ಇ.ಡಿ ಮತ್ತು ಸಿಬಿಐಗೆ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಆದೇಶ ನೀಡಲು ಅರ್ಹವಾಗಿಲ್ಲ. ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದೂ ಕೋರ್ಟ್ ನಿರ್ಬಂಧ ವಿಧಿಸಿದೆ.
ಆದರೆ, ದೇಶಮುಖ್ ಅವರು ಪ್ರಕರಣದಲ್ಲಿ ಬಂಧನಕ್ಕೊಳಗಾದರೆ, ಇತರ ಸಾಮಾನ್ಯ ದಾವೆದಾರರಂತೆ ಪರಿಹಾರ ಕ್ರಮಕ್ಕಾಗಿ ಸೂಕ್ತ ನ್ಯಾಯಾಲಯವನನ್ನು ಸಂಪರ್ಕಿಸುವ ಹಕ್ಕನ್ನು ಹೊಂದಿದ್ದಾರೆ ಎಂದೂ ಹೈಕೋರ್ಟ್ ಹೇಳಿದೆ.