ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಕ್ರೋಡೀಕೃತ ಉತ್ತರವನ್ನು ಸಲ್ಲಿಸಲು ಮತ್ತು ಅಗ್ನಿಪಥ ಯೋಜನೆಯನ್ನು ಪ್ರಕಟಿಸುವ ಮೊದಲು ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ನೀಡಿದ್ದ ಜಾಹೀರಾತುಗಳಿಗೆ ಅನುಗುಣವಾಗಿ ನಡೆಯತ್ತಿರುವ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತ್ಯೇಕವಾಗಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.