ನವದೆಹಲಿ: ವಾಟ್ಸ್ಆ್ಯಪ್ನ ಖಾಸಗಿತನದ ಹೊಸ ನೀತಿಗೆ ಸಂಬಂಧಿಸಿದಂತೆ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ತನ್ನ ನೀಲುವನ್ನು ತಿಳಿಸುವಂತೆ ದೆಹಲಿ ಹೈಕೋರ್ಟ್ ಭಾರತೀಯ ಸ್ಪರ್ಧಾ ಆಯೋಗಕ್ಕೆ (ಸಿಐಐ) ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನು ಒಳಗೊಂಡ ಪೀಠವು ಅರ್ಜಿ ಕುರಿತಾಗಿ ಮೇ 21ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಸಿಐಗೆ ಸೂಚಿಸಿದೆ. ಅದೇ ದಿನ ಮುಂದಿನ ವಿಚಾರಣೆಯೂ ನಡೆಯಲಿದೆ.