ಲಿಖಿತ ಪರೀಕ್ಷೆಯ ಮೊದಲು ಕಟ್ ಆಫ್ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟಿಂಗ್ ಮಾನದಂಡ ಅಳವಡಿಸಿಕೊಳ್ಳುವುದು ತಾರತಮ್ಯ ಎಂದು ಪ್ರತಿಪಾದಿಸಿ ವಿಕ್ರಮ್ ಸ್ವಾಮಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.