ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕೃಷ್ಣನ ಜನ್ಮಸ್ಥಳ ವಿವಾದ:ಕೆಳಹಂತದ ಕೋರ್ಟ್‌ನ ವಿಚಾರಣೆಗೆ ಹೈಕೋರ್ಟ್ ತಡೆ

Last Updated 4 ಆಗಸ್ಟ್ 2022, 10:54 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್‌: ಶ್ರೀಕೃಷ್ಣನ ‘ವಾಸ್ತವ ಜನ್ಮಸ್ಥಳ’ವಾದ ಮಥುರಾದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂಬ ಕೆಲ ಭಕ್ತರ ಅರ್ಜಿ ಕುರಿತಂತೆ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್ ತಡೆ ನೀಡಿದೆ.

ಸದ್ಯ, ಈ ಸ್ಥಳವು ಈದ್ಗಾ ಮಸೀದಿ ಟ್ರಸ್ಟ್‌ನ ಸುಪರ್ದಿಯಲ್ಲಿದೆ ಎಂದು ಅರ್ಜಿದಾರರು ವಾದಿಸಿದ್ದರು. ಪ್ರಕರಣ ಕುರಿತಂತೆ ಪ್ರಮಾಣಪತ್ರ ಸಲ್ಲಿಸುವಂತೆ ಎರಡೂ ಕಡೆಯ ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿತು. ರಿಜಿಸ್ಟ್ರಾರ್‌ ಅವರು ವಿಚಾರಣೆಯ ಮುಂದಿನ ದಿನಾಂಕ ಗೊತ್ತುಪಡಿಸಲಿದ್ದಾರೆ.

ಅರ್ಜಿದಾರರು ಮತ್ತು ಪ್ರತಿವಾದಿಗಳು ನಾಲ್ಕು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಬಹುದು ಎಂದು ಕೋರ್ಟ್ ಇದೇ ವೇಳೆ ಸೂಚಿಸಿತು.

ಮಥುರಾದ ಜಿಲ್ಲಾ ನ್ಯಾಯಾಲಯವು ಮೇ 19, 2022ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್‌ ವಕ್ಫ್‌ ಮಂಡಳಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT