ನವದೆಹಲಿ:ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಭಾನುವಾರ ರಾಜ್ಯಸಭೆಯಸದಸ್ಯರಾಗಿ ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.ಕರ್ನಾಟಕದಿಂದ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
1996ರ ನಂತರ ದೇವೇಗೌಡ ಅವರು ಮೇಲ್ಮನೆ ಸದಸ್ಯರಾಗಿ ಸದನ ಪ್ರವೇಶಿಸಿದಂತಾಗಿದೆ. ‘ರಾಜ್ಯಸಭೆಗೆ ಒಳ್ಳೆಯ ಸೇರ್ಪಡೆ’ಎಂದು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯನಾಯ್ಡು ಬಣ್ಣಿಸಿದರು.
ಮಾಜಿ ಪ್ರಧಾನಿ ಮತ್ತು ದೇಶದ ಅತ್ಯಂತ ಹಿರಿಯ ನಾಯಕರೊಬ್ಬರು ಸದನವನ್ನು ಪ್ರವೇಶಿಸಿದ್ದಾರೆ ಎಂದು ನಾಯ್ಡು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.