ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿಬಲ್, ಗಾಂಧಿ ಕುಟುಂಬ ಹಿಂದೆ ಸರಿದು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದರು. ಪಂಜಾಬ್ನಲ್ಲಿ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲು ರಾಹುಲ್ ಗಾಂಧಿ ಅವರಿಗೆ ಯಾವ ಅರ್ಹತೆಯಿತ್ತು ಎಂದು ಪ್ರಶ್ನಿಸಿದ್ದರು.