<p><strong>ನವದೆಹಲಿ:</strong> ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ.ಗುರುವಾರ ಲೋಕಸಭೆಯಲ್ಲಿ ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಆತ ಒಬ್ಬ ಕ್ರಿಮಿನಲ್' ಎಂದು ವಾಗ್ದಾಳಿ ಮಾಡಿದ್ದಾರೆ.</p>.<p>ಅಕ್ಟೋಬರ್ 3ರಂದು ನಡೆದ ಲಖೀಂಪುರ-ಖೇರಿ ಹಿಂಸಾಚಾರ ಪ್ರಕರಣದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದರು. ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.</p>.<p>ಲೋಕಸಭೆಯಲ್ಲಿಗುರುವಾರ ಭಾರಿ ಗದ್ದಲ ನಡೆಯಿತು. ಸಚಿವರ ರಾಜೀನಾಮೆಗಾಗಿ ಘೋಷಣೆ ಕೂಗಿದರು.</p>.<p>ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಬೇಕು. ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು. 'ಆತ ಒಬ್ಬ ಕ್ರಿಮಿನಲ್' ಎಂದು ಸದನದಲ್ಲಿ ಗದ್ದಲದ ನಡುವೆ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಲಖೀಂಪುರ ಖೇರಿ ಪ್ರಕರಣವು ಪೂರ್ವಯೋಜಿತ ಷಡ್ಯಂತ್ರ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಇಟಿ) ದೋಷಾರೋಪಪಟ್ಟಿ ದಾಖಲಿಸಿದೆ. ಈ ನಡುವೆ ಪತ್ರಕರ್ತರ ವಿರುದ್ಧ ಅಜಯ್ಮಿಶ್ರಾ ಅತಿರೇಕವಾಗಿ ವರ್ತಿಸಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.</p>.<p>ಇದರಿಂದಾಗಿ ಆಡಳಿತರೂಢ ಬಿಜೆಪಿ ಪಕ್ಷವು ಇಕ್ಕಟ್ಟಿಗೆ ಸಿಲುಕಿದೆ. ಉಭಯ ಸದನಗಳಲ್ಲಿ ಗದ್ದಲ ನಡುವೆ ಕಲಾಪವನ್ನು 2 ಗಂಟೆಯವರೆಗೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ.ಗುರುವಾರ ಲೋಕಸಭೆಯಲ್ಲಿ ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಆತ ಒಬ್ಬ ಕ್ರಿಮಿನಲ್' ಎಂದು ವಾಗ್ದಾಳಿ ಮಾಡಿದ್ದಾರೆ.</p>.<p>ಅಕ್ಟೋಬರ್ 3ರಂದು ನಡೆದ ಲಖೀಂಪುರ-ಖೇರಿ ಹಿಂಸಾಚಾರ ಪ್ರಕರಣದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದರು. ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.</p>.<p>ಲೋಕಸಭೆಯಲ್ಲಿಗುರುವಾರ ಭಾರಿ ಗದ್ದಲ ನಡೆಯಿತು. ಸಚಿವರ ರಾಜೀನಾಮೆಗಾಗಿ ಘೋಷಣೆ ಕೂಗಿದರು.</p>.<p>ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಬೇಕು. ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು. 'ಆತ ಒಬ್ಬ ಕ್ರಿಮಿನಲ್' ಎಂದು ಸದನದಲ್ಲಿ ಗದ್ದಲದ ನಡುವೆ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಲಖೀಂಪುರ ಖೇರಿ ಪ್ರಕರಣವು ಪೂರ್ವಯೋಜಿತ ಷಡ್ಯಂತ್ರ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಇಟಿ) ದೋಷಾರೋಪಪಟ್ಟಿ ದಾಖಲಿಸಿದೆ. ಈ ನಡುವೆ ಪತ್ರಕರ್ತರ ವಿರುದ್ಧ ಅಜಯ್ಮಿಶ್ರಾ ಅತಿರೇಕವಾಗಿ ವರ್ತಿಸಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.</p>.<p>ಇದರಿಂದಾಗಿ ಆಡಳಿತರೂಢ ಬಿಜೆಪಿ ಪಕ್ಷವು ಇಕ್ಕಟ್ಟಿಗೆ ಸಿಲುಕಿದೆ. ಉಭಯ ಸದನಗಳಲ್ಲಿ ಗದ್ದಲ ನಡುವೆ ಕಲಾಪವನ್ನು 2 ಗಂಟೆಯವರೆಗೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>