ಮುಖ್ಯೋಪಾಧ್ಯಾಯಿನಿ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಮೇ 16 ರಂದು ಅವರನ್ನು ಪೊಲೀಸ್ ಠಾಣೆಗೆ ಕರೆತರಲಾಯಿತು. ಅಸ್ಸಾಂನಲ್ಲಿ ಗೋಮಾಂಸ ಸೇವನೆಯು ಕಾನೂನುಬಾಹಿರವಲ್ಲ. ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ, ದೇವಾಲಯ ಮತ್ತು ಸತ್ರ (ವೈಷ್ಣವ ಮಠ)ದ ಐದು ಕಿಮೀ ವ್ಯಾಪ್ತಿಯ ಪ್ರದೇಶಗಳಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ‘ಅಸ್ಸಾಂ ಗೋಸಂರಕ್ಷಣಾ ಕಾಯಿದೆ–2021’ರ ಅಡಿಯಲ್ಲಿ ನಿಷೇಧಿಸಲಾಗಿದೆ. ಜತೆಗೆ,ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್ಗಳ ಅಡಿಯಲ್ಲಿ ಮುಖ್ಯೋಪಾಧ್ಯಾಯಿನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.