‘ಇಷ್ಟು ಮಳೆಯನ್ನು ನಿರೀಕ್ಷಿಸಿರಲಿಲ್ಲ. ಭಾರಿ ಮಳೆಯ ಕಾರಣ ಹಲವೆಡೆ ಭೂಕುಸಿತ ಉಂಟಾಗಿದೆ. ರಾಜ್ಯದ ನದಿಗಳು ತುಂಬಿ ಹರಿಯುತ್ತಿವೆ. ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬಿಡಲಾಗಿದೆ. ಪ್ರವಾಹ ಸ್ಥಿತಿ ಎದುರಾಗಿರುವ ಕಾರಣ, ನದಿ ದಂಡೆಯ ಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.ಜಲಾಶಯಗಳಿಂದ ನೀರು ಹೊರಬಿಟ್ಟಿರುವ ಬಗ್ಗೆ ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.