<p><strong>ಪೋರ್ಟ್ ಬ್ಲೇರ್:</strong> ಅಂಡಮಾನ್ ನಿಕೋಬರ್ ದ್ವೀಪಕ್ಕೆ ಚಂಡಮಾರುತ ಆಸನಿ ಸಮೀಪಿಸುತ್ತಿದ್ದಂತೆ ಭಾನುವಾರ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.</p>.<p>ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/experts-say-future-covid-waves-unlikely-to-have-serious-impact-in-india-some-call-for-easing-mask-921070.html" itemprop="url">ಕೋವಿಡ್: ಭವಿಷ್ಯದ ಅಲೆಗಳಿಂದ ಗಂಭೀರ ಪರಿಣಾಮ ಸಾಧ್ಯತೆ ಕಡಿಮೆ ಎಂದ ತಜ್ಞರು </a></p>.<p>ಅಂಡಮಾನ್, ಚೆನ್ನೈ ಹಾಗೂ ವಿಶಾಖಪಟ್ಟಣದಲ್ಲಿ ಹಡಗು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವರ್ಷದ ಮೊದಲ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.</p>.<p>ದ್ವೀಪದ ವಿವಿಧ ಭಾಗಗಳಲ್ಲಿ ಆರು ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸುಮಾರು 150 ಸಿಬ್ಬಂದಿ ನಿಯೋಜಿಸಲಾಗಿದೆ.</p>.<p>ಪೋರ್ಟ್ ಬ್ಲೇರ್ ಸೇರಿದಂತೆ ಉತ್ತರ, ಮಧ್ಯ ಮತ್ತು ದಕ್ಷಿಣ ಅಂಡಮಾನ್ನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಪೋರ್ಟ್ ಬ್ಲೇರ್ನಲ್ಲಿ 68 ಮತ್ತು ದಿಗ್ಲಿಪುರ್ನಲ್ಲಿ 25 ಎನ್ಡಿಆರ್ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.<br /><br />ಕರಾವಳಿ ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೋರ್ಟ್ ಬ್ಲೇರ್:</strong> ಅಂಡಮಾನ್ ನಿಕೋಬರ್ ದ್ವೀಪಕ್ಕೆ ಚಂಡಮಾರುತ ಆಸನಿ ಸಮೀಪಿಸುತ್ತಿದ್ದಂತೆ ಭಾನುವಾರ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.</p>.<p>ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/experts-say-future-covid-waves-unlikely-to-have-serious-impact-in-india-some-call-for-easing-mask-921070.html" itemprop="url">ಕೋವಿಡ್: ಭವಿಷ್ಯದ ಅಲೆಗಳಿಂದ ಗಂಭೀರ ಪರಿಣಾಮ ಸಾಧ್ಯತೆ ಕಡಿಮೆ ಎಂದ ತಜ್ಞರು </a></p>.<p>ಅಂಡಮಾನ್, ಚೆನ್ನೈ ಹಾಗೂ ವಿಶಾಖಪಟ್ಟಣದಲ್ಲಿ ಹಡಗು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವರ್ಷದ ಮೊದಲ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.</p>.<p>ದ್ವೀಪದ ವಿವಿಧ ಭಾಗಗಳಲ್ಲಿ ಆರು ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸುಮಾರು 150 ಸಿಬ್ಬಂದಿ ನಿಯೋಜಿಸಲಾಗಿದೆ.</p>.<p>ಪೋರ್ಟ್ ಬ್ಲೇರ್ ಸೇರಿದಂತೆ ಉತ್ತರ, ಮಧ್ಯ ಮತ್ತು ದಕ್ಷಿಣ ಅಂಡಮಾನ್ನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಪೋರ್ಟ್ ಬ್ಲೇರ್ನಲ್ಲಿ 68 ಮತ್ತು ದಿಗ್ಲಿಪುರ್ನಲ್ಲಿ 25 ಎನ್ಡಿಆರ್ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.<br /><br />ಕರಾವಳಿ ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>