ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಮಳೆಗೆ ಮತ್ತೆ 3 ಸಾವು

Last Updated 5 ನವೆಂಬರ್ 2022, 14:43 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 26ಕ್ಕೆ ಏರಿದೆ ಎಂದು ರಾಜ್ಯ ಸರ್ಕಾರ ಶನಿವಾರ ತಿಳಿಸಿದೆ.

ಚೆನ್ನೈನಲ್ಲಿ ಇಬ್ಬರು ಮತ್ತು ತಿರುವಳ್ಳೂರು ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ.

ನಾಗಪಟ್ಟಿನಂ ಜಿಲ್ಲೆಯ ಕೊಡಿಯಕಾರೈನಲ್ಲಿ ಅತಿ ಹೆಚ್ಚು ಅಂದರೆ, 9 ಸೆಂ.ಮೀ ಮಳೆಯಾಗಿದೆ. ರಾಮೇಶ್ವರಂನಲ್ಲಿ 8 ಸೆಂ.ಮೀ ಮಳೆ ಸುರಿದಿದೆ.

ಭಾರಿ ಮಳೆಯಿಂದಾಗಿ ಸುಮಾರು 25 ಜಾನುವಾರುಗಳು ಕಾಣೆಯಾಗಿವೆ. ಸುಮಾರು 140 ಮನೆಗಳಿಗೆ ಹಾನಿಯಾಗಿದೆ.ಚೆನ್ನೈನಲ್ಲಿ ಧರೆಗುರುಳಿದ್ದ ಸುಮಾರು 64 ಮರಗಳನ್ನು ತೆರವುಗೊಳಿಸಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT