<p><strong>ಮಲಪ್ಪುರಂ (ಕೇರಳ):</strong> ಕೇರಳದ ವಿವಿಧ ಕಡೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಂಗಳವಾರ ಮುಂಜಾನೆ ಮಲಪ್ಪುರಂ ಜಿಲ್ಲೆಯ ಕರಿಪುರದಲ್ಲಿ ಮನೆಯೊಂದು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಘಟನೆಯಲ್ಲಿ ಆರು ತಿಂಗಳ ಮಗು ಮತ್ತು ಆಕೆಯ ಸಹೋದರಿ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಕ್ಕಳು, ಮುಂಡೋಟ್ಟುಪದಮ್ ಸಮೀಪದ ಮಠಮ್ಕುಲಂನಲ್ಲಿನ ತನ್ನ ಅಜ್ಜನ ಮನೆಯಲ್ಲಿ ವಾಸವಿದ್ದರು. ಅದೇ ಕಟ್ಟಡ ಈಗ ಮಳೆಗೆ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಸ್ಥಳೀಯ ಮೂಲಗಳ ಪ್ರಕಾರ, ’ಮುಂಜಾನೆ 4.30ರ ಸುಮಾರಿಗೆ ಸುರಿದ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಈ ಸಂತ್ರಸ್ತ ಕುಟುಂಬದ ನಿವಾಸದ ಮೇಲೆ ಕುಸಿದಿದೆ. ಪರಿಣಾಮವಾಗಿ ಮನೆಯೊಳಗಿದ್ದ ಮಕ್ಕಳು ತೀವ್ರವಾಗಿ ಗಾಯಗೊಂಡಿವೆ. ತಕ್ಷಣ ಅವರನ್ನುಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಮಕ್ಕಳು ಮೃತಪಟ್ಟಿವೆ.</p>.<p>ಕೇರಳದಾದ್ಯಂತಸೋಮವಾರದಿಂದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳವಾರವೂ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲಪ್ಪುರಂ (ಕೇರಳ):</strong> ಕೇರಳದ ವಿವಿಧ ಕಡೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಂಗಳವಾರ ಮುಂಜಾನೆ ಮಲಪ್ಪುರಂ ಜಿಲ್ಲೆಯ ಕರಿಪುರದಲ್ಲಿ ಮನೆಯೊಂದು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಘಟನೆಯಲ್ಲಿ ಆರು ತಿಂಗಳ ಮಗು ಮತ್ತು ಆಕೆಯ ಸಹೋದರಿ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಕ್ಕಳು, ಮುಂಡೋಟ್ಟುಪದಮ್ ಸಮೀಪದ ಮಠಮ್ಕುಲಂನಲ್ಲಿನ ತನ್ನ ಅಜ್ಜನ ಮನೆಯಲ್ಲಿ ವಾಸವಿದ್ದರು. ಅದೇ ಕಟ್ಟಡ ಈಗ ಮಳೆಗೆ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಸ್ಥಳೀಯ ಮೂಲಗಳ ಪ್ರಕಾರ, ’ಮುಂಜಾನೆ 4.30ರ ಸುಮಾರಿಗೆ ಸುರಿದ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಈ ಸಂತ್ರಸ್ತ ಕುಟುಂಬದ ನಿವಾಸದ ಮೇಲೆ ಕುಸಿದಿದೆ. ಪರಿಣಾಮವಾಗಿ ಮನೆಯೊಳಗಿದ್ದ ಮಕ್ಕಳು ತೀವ್ರವಾಗಿ ಗಾಯಗೊಂಡಿವೆ. ತಕ್ಷಣ ಅವರನ್ನುಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಮಕ್ಕಳು ಮೃತಪಟ್ಟಿವೆ.</p>.<p>ಕೇರಳದಾದ್ಯಂತಸೋಮವಾರದಿಂದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳವಾರವೂ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>