<p class="bodytext"><strong>ತಿರುವನಂತಪುರ: </strong>ಕೇರಳದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಸರ್ಕಾರ ಕಟ್ಟೆಚ್ಚರವಹಿಸಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಶುಕ್ರವಾರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಅಲ್ಲದೆ ಪರಿಹಾರ ಶಿಬಿರಗಳನ್ನೂ ತೆರೆದಿದೆ.</p>.<p class="bodytext">ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ.</p>.<p class="bodytext">ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜಧಾನಿ ತಿರುವನಂತರಪುರದ ಕರಮಣ ಮತ್ತು ಕಿಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅರುವಿಕ್ಕರ ಅಣೆಕಟ್ಟಿಗೆ ಒಳಹರಿವು ಹೆಚ್ಚಾಗಿದ್ದರಿಂದ ಅದರ ಗೇಟುಗಳನ್ನು ತೆರೆಯಾಗಿದೆ.</p>.<p class="bodytext">ಈ ನದಿಗಳ ಬದಿಯಲ್ಲಿ ವಾಸಿಸುತ್ತಿರುವ ಹಲವರನ್ನು ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಮತ್ತು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ರಾತ್ರಿ ಮಳೆಯಿಂದಾಗಿ ದಕ್ಷಿಣ ಕೊಲ್ಲಂ ಜಿಲ್ಲೆಯ ಅನೇಕ ಭಾಗಗಳಲ್ಲಿ ಮರಗಳು ಬುಡಮೇಲಾಗಿವೆ.</p>.<p class="bodytext">ಸಮುದ್ರದಲ್ಲಿ ಗುರುವಾರ ರಾತ್ರಿಯಿಂದ ಹೆಚ್ಚಿನ ಅಲೆಗಳು ಬರುತ್ತಿದ್ದು, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ ಜಿಲ್ಲೆಗಳ ಕರಾವಳಿಯ ಹಲವು ಮನೆಗಳಿಗೆ ಹಾನಿ ಮಾಡಿವೆ.</p>.<p class="bodytext">ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಒಂಬತ್ತು ತಂಡಗಳು ಕೇರಳಕ್ಕೆ ಬಂದಿವೆ.</p>.<p class="bodytext">ಜನರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ 3071 ಕಟ್ಟಡಗಳನ್ನು ಪರಿಹಾರ ಶಿಬಿರಗಳಿಗೆ ಗುರುತಿಸಲಾಗಿದೆ. ಇವುಗಳಲ್ಲಿ ಸುಮಾರು 4.23 ಲಕ್ಷ ಮಂದಿಗೆ ಆಶ್ರಯ ಕಲ್ಪಿಸಬಹುದಾಗಿದೆ. ಆದರೆ, ಕೋವಿಡ್–19 ಕಾರಣಕ್ಕೆ ಜನರು ಈ ಸ್ಥಳಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಮೇ 31ಕ್ಕೆ ಕೇರಳಕ್ಕೆ ಮುಂಗಾರು<br />ನವದೆಹಲಿ (ಪಿಟಿಐ):</strong> ಕೇರಳಕ್ಕೆ ನೈಋತ್ಯ ಮುಂಗಾರು ಮೇ 31ಕ್ಕೆ ಆಗಮಿಸುವ ಸಾಧ್ಯತೆ ಇದೆ. ಇದು ಸಾಮಾನ್ಯ ದಿನಕ್ಕಿಂತಲೂ ಒಂದು ದಿನ ಮೊದಲು ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ತಿರುವನಂತಪುರ: </strong>ಕೇರಳದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಸರ್ಕಾರ ಕಟ್ಟೆಚ್ಚರವಹಿಸಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಶುಕ್ರವಾರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಅಲ್ಲದೆ ಪರಿಹಾರ ಶಿಬಿರಗಳನ್ನೂ ತೆರೆದಿದೆ.</p>.<p class="bodytext">ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ.</p>.<p class="bodytext">ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜಧಾನಿ ತಿರುವನಂತರಪುರದ ಕರಮಣ ಮತ್ತು ಕಿಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅರುವಿಕ್ಕರ ಅಣೆಕಟ್ಟಿಗೆ ಒಳಹರಿವು ಹೆಚ್ಚಾಗಿದ್ದರಿಂದ ಅದರ ಗೇಟುಗಳನ್ನು ತೆರೆಯಾಗಿದೆ.</p>.<p class="bodytext">ಈ ನದಿಗಳ ಬದಿಯಲ್ಲಿ ವಾಸಿಸುತ್ತಿರುವ ಹಲವರನ್ನು ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಮತ್ತು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ರಾತ್ರಿ ಮಳೆಯಿಂದಾಗಿ ದಕ್ಷಿಣ ಕೊಲ್ಲಂ ಜಿಲ್ಲೆಯ ಅನೇಕ ಭಾಗಗಳಲ್ಲಿ ಮರಗಳು ಬುಡಮೇಲಾಗಿವೆ.</p>.<p class="bodytext">ಸಮುದ್ರದಲ್ಲಿ ಗುರುವಾರ ರಾತ್ರಿಯಿಂದ ಹೆಚ್ಚಿನ ಅಲೆಗಳು ಬರುತ್ತಿದ್ದು, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ ಜಿಲ್ಲೆಗಳ ಕರಾವಳಿಯ ಹಲವು ಮನೆಗಳಿಗೆ ಹಾನಿ ಮಾಡಿವೆ.</p>.<p class="bodytext">ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಒಂಬತ್ತು ತಂಡಗಳು ಕೇರಳಕ್ಕೆ ಬಂದಿವೆ.</p>.<p class="bodytext">ಜನರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ 3071 ಕಟ್ಟಡಗಳನ್ನು ಪರಿಹಾರ ಶಿಬಿರಗಳಿಗೆ ಗುರುತಿಸಲಾಗಿದೆ. ಇವುಗಳಲ್ಲಿ ಸುಮಾರು 4.23 ಲಕ್ಷ ಮಂದಿಗೆ ಆಶ್ರಯ ಕಲ್ಪಿಸಬಹುದಾಗಿದೆ. ಆದರೆ, ಕೋವಿಡ್–19 ಕಾರಣಕ್ಕೆ ಜನರು ಈ ಸ್ಥಳಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಮೇ 31ಕ್ಕೆ ಕೇರಳಕ್ಕೆ ಮುಂಗಾರು<br />ನವದೆಹಲಿ (ಪಿಟಿಐ):</strong> ಕೇರಳಕ್ಕೆ ನೈಋತ್ಯ ಮುಂಗಾರು ಮೇ 31ಕ್ಕೆ ಆಗಮಿಸುವ ಸಾಧ್ಯತೆ ಇದೆ. ಇದು ಸಾಮಾನ್ಯ ದಿನಕ್ಕಿಂತಲೂ ಒಂದು ದಿನ ಮೊದಲು ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>