ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈಯಲ್ಲಿ ಭಾರಿ ಮಳೆ: ಸರ್ಕಾರಿ ಕಚೇರಿ, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ

Last Updated 31 ಡಿಸೆಂಬರ್ 2021, 11:07 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಹಲವೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಚೆನ್ನೈ, ಕಾಂಚೀಪುರಂ, ತಿರುವಳ್ಳೂರುಗಳಲ್ಲಿ ಭಾರಿ ಮಳೆಯ ಕಾರಣ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಶುಕ್ರವಾರ ರಜೆ ಘೋಷಿಸಿದ್ದಾರೆ.

ಚೆನ್ನೈಯಲ್ಲಿ ವಿದ್ಯುದಾಘಾತದಿಂದ ಮೂವರು ಮೃತಪಟ್ಟಿದ್ದಾರೆ. ಜಲಾವೃತಗೊಂಡಿರುವ ಕಾರಣ ನಾಲ್ಕು ಸುರಂಗ ಮಾರ್ಗಗಳನ್ನು ಮುಚ್ಚಲಾಗಿದೆ.

ಸ್ಟಾಲಿನ್ ಅವರು ಚೆನ್ನೈ ನಗರಪಾಲಿಕೆ ಆಯುಕ್ತ ಗಗನ್ ಸಿಂಗ್ ಬೇಡಿ ಹಾಗೂ ಇತರ ಅಧಿಕಾರಿಗಳ ಜತೆಗೆ ಚೆನ್ನೈಯ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಿದ್ದಾರೆ.

ಸುರಂಗ ಮಾರ್ಗಗಳನ್ನು ಮುಚ್ಚಿರುವ ಕಾರಣ ಚೆನ್ನೈಯ ಹಲವೆಡೆ ಸಂಚಾರಕ್ಕೂ ಅಡಚಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT