ಚೆನ್ನೈ ಮತ್ತು ತಮಿಳುನಾಡಿನ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿವೆ. ತೂತ್ತುಕುಡಿ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಶುಕ್ರವಾರ ಸತತ ಎರಡನೇ ದಿನವೂ ಮಳೆ ಸುರಿದಿದೆ. ರಾಮನಾಥಪುರಂನಲ್ಲಿ ಭಾರಿ ಮಳೆಯಾಗಿದೆ. ಕಾಂಚಿಪುರಂ, ತಿರುವಳ್ಳೂರು, ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ, ಕಾವೇರಿ ನದಿ ಕಣಿವೆ ಪ್ರದೇಶದಲ್ಲಿರುವ ಮದುರೆ, ತಿರುಚಿರಾಪಳ್ಳಿ, ವಿಲ್ಲುಪುರಂ ಜಿಲ್ಲೆಗಳಲ್ಲಿಯೂ ಶುಕ್ರವಾರ ಮಳೆಯಾಗಿದೆ.