<p class="title"><strong>ಚೆನ್ನೈ: </strong>ಚೆನ್ನೈ ಮತ್ತು ಹೊರವಲಯದದಲ್ಲಿ ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ನಗರ ಪರಿಮಿತಿಯಲ್ಲಿರುವ ಮೂರು ಜಲಾಶಯಗಳಿಗೆ ನೀರು ಹೊರಬಿಡಲಿದ್ದು, ನಾಗರಿಕರಿಗೆ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ.</p>.<p class="title">ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ನೀರು ನುಗ್ಗಿರುವ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಅಲ್ಲದೆ, ತಗ್ಗು ಪ್ರದೇಶಗಳಲ್ಲಿ ಇರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಮತ್ತು ನೀರು ತೆರವುಗೊಳಿಸಲು ಸೂಕ್ತ ಕ್ರಮವಹಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.</p>.<p class="title">ಅಲ್ಲದೆ, ಸಚಿವ ಸಹೋದ್ಯೋಗಿಗಳ ಜೊತೆಗೂಡಿ ಸಂತ್ರಸ್ತರಿಗೆ ಆಹಾರ, ಹಾಲು, ಹೊದಿಗೆ ವಿತರಿಸಿದರು. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್ ಅವರ ಪ್ರಕಾರ, ಚೆನ್ನೈ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ 10 ರಿಂದ 23 ಸೆಂಟಿ ಮೀಟರ್ನಷ್ಟು ಮಳೆ ಸುರಿದಿರುವುದು ದಾಖಲಾಗಿದೆ.</p>.<p>ತಮಿಳುನಾಡು ಸಚಿವಾಲಯದ ಬಳಿ ಇರುವ ಮಾಪನದಲ್ಲಿ ಒಟ್ಟು 23 ಸೆಂ.ಮೀ ಮಳೆ ಸುರಿದಿರುವುದು ದಾಖಲಾಗಿದೆ. ಮಳೆ ಕಾರಣ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಪೂಂಡಿ, ಚೆಂಬರಂಬಕ್ಕಂ ಮತ್ತು ಫುಜಲ್ ಜಲಾಶಯಗಳಿಂದ ನೀರು ಹೊರಬಿಡಲು ಸಿದ್ಧತೆ ನಡೆದಿದೆ. ಈ ಜಲಾಶಯಗಳು ಚೆನ್ನೈ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲಗಳಾಗಿವೆ.</p>.<p>ಸಂತ್ರಸ್ತರಿಗೆ ನೆರವಾಗಲು ರಾಷ್ಟ್ರೀಯ ವಿಕೋಪ ರಕ್ಷಣಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿದೆ. ಇವುಗಳ ಪೈಕಿ ಚೆಂಗಲ್ಪೇಟ್ ಮತ್ತು ತಿರುವಳ್ಳುರ್ಗೆ ತಲಾ ಒಂದು, ಎರಡು ತಂಡಗಳನ್ನು ಮಧುರೈನಲ್ಲಿ ನಿಯೋಜಿಸಲಾಗಿದೆ.</p>.<p>ನಗರ ಭಾಗದಲ್ಲಿ ಸೈದಾಪೇಟ್, ವೆಲಾಚೆರಿ, ಅದಂಬಕ್ಕಂ, ಮಡಿಪಕ್ಕಂ ಭಾಗದಲ್ಲಿ ನೀರು ಎರಡರಿಂದ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.</p>.<p>2015ರಲ್ಲಿಯೂ ಚೆನ್ನೈನಲ್ಲಿ ಭಾರಿಮಳೆಯಾಗಿದ್ದು, ದುಃಸ್ವಪ್ನವಾಗಿ ಕಾಡಿತ್ತು. ಆಗ ಚೆಂಬರಂಬಕ್ಕಂ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಹರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ: </strong>ಚೆನ್ನೈ ಮತ್ತು ಹೊರವಲಯದದಲ್ಲಿ ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ನಗರ ಪರಿಮಿತಿಯಲ್ಲಿರುವ ಮೂರು ಜಲಾಶಯಗಳಿಗೆ ನೀರು ಹೊರಬಿಡಲಿದ್ದು, ನಾಗರಿಕರಿಗೆ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ.</p>.<p class="title">ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ನೀರು ನುಗ್ಗಿರುವ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಅಲ್ಲದೆ, ತಗ್ಗು ಪ್ರದೇಶಗಳಲ್ಲಿ ಇರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಮತ್ತು ನೀರು ತೆರವುಗೊಳಿಸಲು ಸೂಕ್ತ ಕ್ರಮವಹಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.</p>.<p class="title">ಅಲ್ಲದೆ, ಸಚಿವ ಸಹೋದ್ಯೋಗಿಗಳ ಜೊತೆಗೂಡಿ ಸಂತ್ರಸ್ತರಿಗೆ ಆಹಾರ, ಹಾಲು, ಹೊದಿಗೆ ವಿತರಿಸಿದರು. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್ ಅವರ ಪ್ರಕಾರ, ಚೆನ್ನೈ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ 10 ರಿಂದ 23 ಸೆಂಟಿ ಮೀಟರ್ನಷ್ಟು ಮಳೆ ಸುರಿದಿರುವುದು ದಾಖಲಾಗಿದೆ.</p>.<p>ತಮಿಳುನಾಡು ಸಚಿವಾಲಯದ ಬಳಿ ಇರುವ ಮಾಪನದಲ್ಲಿ ಒಟ್ಟು 23 ಸೆಂ.ಮೀ ಮಳೆ ಸುರಿದಿರುವುದು ದಾಖಲಾಗಿದೆ. ಮಳೆ ಕಾರಣ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಪೂಂಡಿ, ಚೆಂಬರಂಬಕ್ಕಂ ಮತ್ತು ಫುಜಲ್ ಜಲಾಶಯಗಳಿಂದ ನೀರು ಹೊರಬಿಡಲು ಸಿದ್ಧತೆ ನಡೆದಿದೆ. ಈ ಜಲಾಶಯಗಳು ಚೆನ್ನೈ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲಗಳಾಗಿವೆ.</p>.<p>ಸಂತ್ರಸ್ತರಿಗೆ ನೆರವಾಗಲು ರಾಷ್ಟ್ರೀಯ ವಿಕೋಪ ರಕ್ಷಣಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿದೆ. ಇವುಗಳ ಪೈಕಿ ಚೆಂಗಲ್ಪೇಟ್ ಮತ್ತು ತಿರುವಳ್ಳುರ್ಗೆ ತಲಾ ಒಂದು, ಎರಡು ತಂಡಗಳನ್ನು ಮಧುರೈನಲ್ಲಿ ನಿಯೋಜಿಸಲಾಗಿದೆ.</p>.<p>ನಗರ ಭಾಗದಲ್ಲಿ ಸೈದಾಪೇಟ್, ವೆಲಾಚೆರಿ, ಅದಂಬಕ್ಕಂ, ಮಡಿಪಕ್ಕಂ ಭಾಗದಲ್ಲಿ ನೀರು ಎರಡರಿಂದ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.</p>.<p>2015ರಲ್ಲಿಯೂ ಚೆನ್ನೈನಲ್ಲಿ ಭಾರಿಮಳೆಯಾಗಿದ್ದು, ದುಃಸ್ವಪ್ನವಾಗಿ ಕಾಡಿತ್ತು. ಆಗ ಚೆಂಬರಂಬಕ್ಕಂ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಹರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>