ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಗಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಪೊಲೀಸ್‌ ಪಡೆ ನಿಯೋಜನೆ

Last Updated 28 ಜನವರಿ 2021, 6:03 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಗಡಿ ಪ್ರದೇಶಗಳಲ್ಲಿ ಗುರುವಾರ ಭಾರೀ ಪ್ರಮಾಣದಲ್ಲಿ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ‌ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ. ಅಲ್ಲದೆ ಕೆಂಪು ಕೋಟೆಗೂ ಬಿಗಿ ಭದ್ರತೆಯನ್ನು ನೀಡಲಾಗಿದೆ’ ಎಂದು ಅವರು ಹೇಳಿದರು.

‘ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ. ಈ ಘಟನೆಯಲ್ಲಿ 394 ಸಿಬ್ಬಂದಿ ಗಾಯಗೊಂಡಿದ್ದಾರೆ. 30 ಪೊಲೀಸ್ ವಾಹನಗಳು ಹಾನಿಗೊಳಗಾಗಿವೆ’ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT