<p><strong>ಮುಂಬೈ</strong>: ಜೂನಿಯರ್ ಕಾಲೇಜಿನ ಪ್ರಥಮ ವರ್ಷದ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ವಿವಿಧ ಶಿಕ್ಷಣ ಮಂಡಳಿಗಳಲ್ಲಿರುವ ತಜ್ಞರನ್ನೊಳಗೊಂಡ ಸಮಿತಿ ರಚಿಸುವ ಕುರಿತು ಪರಿಶೀಲನೆ ನಡೆಸುವಂತೆ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ಆರ್. ಐ.ಚಾಗ್ಲಾ ಅವರನ್ನೊಳಗೊಂಡ ಪೀಠವು ಮಹಾರಾಷ್ಟ್ರ ಸರ್ಕಾರದ ಪರ ಹಾಜರಾಗಿದ್ದ ವಕೀಲರಿಗೆ ಈ ನಿರ್ದೇಶನ ನೀಡಿದ್ದು, ಸಮಿತಿ ರಚನೆ ಕುರಿತು ನ್ಯಾಯಾಲಯ ನೀಡಿದ ಸಲಹೆಯನ್ನು ಕಾರ್ಯಗತಗೊಳಿಸಬಹುದೇ ಹಾಗೂ ಪ್ರಸ್ತುತ ಉದ್ಭವಿಸಿರುವ ಸಮಸ್ಯೆಗೆ ಇದು ಸೂಕ್ತ ಪರಿಹಾರವಾಗುತ್ತದೆಯೇ‘ ಎಂದು ಕೇಳಿದೆ.</p>.<p>‘ಸಿಇಟಿ ಮೂಲಕಜೂನಿಯರ್ ಕಾಲೇಜುಗಳಿಗೆ ಪ್ರವೇಶ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಸಿಇಟಿ ಪ್ರಶ್ನೆ ಪತ್ರಿಕೆಯು ಎಸ್ಎಸ್ಸಿ ಮಂಡಳಿಯ ಪಠ್ಯಕ್ರಮವನ್ನು ಆಧರಿಸಿರುತ್ತದೆ‘ ಎಂಬ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಐಸಿಎಸ್ಇ ವಿದ್ಯಾರ್ಥಿನಿ ಹಾಗೂ ಮತ್ತಿತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಜೂನಿಯರ್ ಕಾಲೇಜಿನ ಪ್ರಥಮ ವರ್ಷದ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ವಿವಿಧ ಶಿಕ್ಷಣ ಮಂಡಳಿಗಳಲ್ಲಿರುವ ತಜ್ಞರನ್ನೊಳಗೊಂಡ ಸಮಿತಿ ರಚಿಸುವ ಕುರಿತು ಪರಿಶೀಲನೆ ನಡೆಸುವಂತೆ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ಆರ್. ಐ.ಚಾಗ್ಲಾ ಅವರನ್ನೊಳಗೊಂಡ ಪೀಠವು ಮಹಾರಾಷ್ಟ್ರ ಸರ್ಕಾರದ ಪರ ಹಾಜರಾಗಿದ್ದ ವಕೀಲರಿಗೆ ಈ ನಿರ್ದೇಶನ ನೀಡಿದ್ದು, ಸಮಿತಿ ರಚನೆ ಕುರಿತು ನ್ಯಾಯಾಲಯ ನೀಡಿದ ಸಲಹೆಯನ್ನು ಕಾರ್ಯಗತಗೊಳಿಸಬಹುದೇ ಹಾಗೂ ಪ್ರಸ್ತುತ ಉದ್ಭವಿಸಿರುವ ಸಮಸ್ಯೆಗೆ ಇದು ಸೂಕ್ತ ಪರಿಹಾರವಾಗುತ್ತದೆಯೇ‘ ಎಂದು ಕೇಳಿದೆ.</p>.<p>‘ಸಿಇಟಿ ಮೂಲಕಜೂನಿಯರ್ ಕಾಲೇಜುಗಳಿಗೆ ಪ್ರವೇಶ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಸಿಇಟಿ ಪ್ರಶ್ನೆ ಪತ್ರಿಕೆಯು ಎಸ್ಎಸ್ಸಿ ಮಂಡಳಿಯ ಪಠ್ಯಕ್ರಮವನ್ನು ಆಧರಿಸಿರುತ್ತದೆ‘ ಎಂಬ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಐಸಿಎಸ್ಇ ವಿದ್ಯಾರ್ಥಿನಿ ಹಾಗೂ ಮತ್ತಿತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>