<p><strong>ಕೊಚ್ಚಿ</strong>: ‘ಬುಡಕಟ್ಟು ಕುಟುಂಬಗಳಿಗೆ ಆನೆ ದಾಳಿಯಿಂದ ರಕ್ಷಣೆ ಒದಗಿಸಲು ಕಟ್ಟಲಾಗುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು 18 ತಿಂಗಳುಗಳೊಳಗೆ ಪೂರ್ಣಗೊಳಿಸಬೇಕು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕಣ್ಣೂರು ಜಿಲ್ಲೆಯಲ್ಲಿರುವ ಆರಳಂ ಕೃಷಿ ಫಾರ್ಮ್ನ 3,500 ಎಕರೆಯಲ್ಲಿ 1,515 ಬುಡಕಟ್ಟು ಕುಟುಂಬಗಳು ವಾಸವಾಗಿವೆ. ಇಲ್ಲಿ ಅರಣ್ಯ ಪ್ರದೇಶ ಹೆಚ್ಚಿರುವುದರಿಂದ ಆನೆಗಳ ದಾಳಿಯೂ ಹೆಚ್ಚಿದೆ. ಇದರಿಂದ ರಕ್ಷಣೆ ಒದಗಿಸಲು ತಡೆಗೋಡೆ ನಿರ್ಮಿಸಲಾಗುತ್ತಿದೆ.</p>.<p>‘ಈಗಾಗಲೇ 3.5 ಕಿ.ಮೀ ಉದ್ದಕ್ಕೆ ಬೇಲಿ ಹಾಕಲಾಗಿದೆ. ಇದನ್ನು ಹೊರತುಪಡಿಸಿ 10.5 ಕಿ.ಮೀ ಎತ್ತರದ ಕಾಂಕ್ರೀಟ್ ಗೋಡೆ ನಿರ್ಮಾಣಕ್ಕಾಗಿ ₹22 ಕೋಟಿ ಮಂಜೂರು ಮಾಡಲಾಗಿದೆ. ಸಂಪೂರ್ಣ ಯೋಜನಾ ಅಧ್ಯಯನವನ್ನೂ ಕೈಗೊಳ್ಳಲಾಗಿದೆ. ಹಾಗಾಗಿ ಈ ಕೃಷಿ ಫಾರ್ಮ್ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು 36 ತಿಂಗಳ ಸಮಯವಕಾಶ ನೀಡಬೇಕು’ ಎಂದು ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.</p>.<p>‘ಪ್ರಾರಂಭದಲ್ಲಿ ಈತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಎಸ್ಸಿ/ಎಸ್ಟಿ ಇಲಾಖೆಗೆ ನೀಡಲಾಗಿತ್ತು. ಇಲಾಖೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಆದರೆ ಇದಕ್ಕೆ ಸಂಬಂಧಿಸಿದ ನಿರ್ಧಾರವನ್ನು ಬಹಳ ಹಿಂದೆಯೇ ಕೈಗೊಳ್ಳಲಾಗಿತ್ತು. ಹಾಗಾಗಿ ಆ ಪ್ರದೇಶದಲ್ಲಿರುವ ಜನರ ಮತ್ತು ಅವರ ಆಸ್ತಿ ರಕ್ಷಣೆಗಾಗಿ ಯಾವುದೇ ವಿಳಂಬ ಮಾಡದೇ ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ನ್ಯಾಯಾಲಯವು ನಿರ್ದೇಶಿಸಿದೆ.</p>.<p>ಇದೇ ಮೊದಲ ಬಾರಿ ಲೋಕೋಪಯೋಗಿ ಇಲಾಖೆಯು ಈ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಿದೆ. ಹಾಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು 18 ತಿಂಗಳುಗಳು ಸಮಯಾವಕಾಶ ನೀಡಲು ಮಾತ್ರ ಸಾಧ್ಯ’ ಎಂದು ನ್ಯಾಯಾಲಯವು ತಿಳಿಸಿದೆ.</p>.<p>‘ಸರಿಯಾದ ಮೇಲ್ವಿಚಾರಣೆ ಇಲ್ಲದಿದ್ದರೆ ಈ ಕೆಲಸವು ಸಕಾಲದಲ್ಲಿ ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು. ಅಲ್ಲದೆ ಕಾಮಗಾರಿಯ ಮೇಲುಸ್ತುವಾರಿಯನ್ನು ವಹಿಸಬೇಕು’ ಎಂದು ನ್ಯಾಯಾಲಯವು ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ‘ಬುಡಕಟ್ಟು ಕುಟುಂಬಗಳಿಗೆ ಆನೆ ದಾಳಿಯಿಂದ ರಕ್ಷಣೆ ಒದಗಿಸಲು ಕಟ್ಟಲಾಗುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು 18 ತಿಂಗಳುಗಳೊಳಗೆ ಪೂರ್ಣಗೊಳಿಸಬೇಕು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕಣ್ಣೂರು ಜಿಲ್ಲೆಯಲ್ಲಿರುವ ಆರಳಂ ಕೃಷಿ ಫಾರ್ಮ್ನ 3,500 ಎಕರೆಯಲ್ಲಿ 1,515 ಬುಡಕಟ್ಟು ಕುಟುಂಬಗಳು ವಾಸವಾಗಿವೆ. ಇಲ್ಲಿ ಅರಣ್ಯ ಪ್ರದೇಶ ಹೆಚ್ಚಿರುವುದರಿಂದ ಆನೆಗಳ ದಾಳಿಯೂ ಹೆಚ್ಚಿದೆ. ಇದರಿಂದ ರಕ್ಷಣೆ ಒದಗಿಸಲು ತಡೆಗೋಡೆ ನಿರ್ಮಿಸಲಾಗುತ್ತಿದೆ.</p>.<p>‘ಈಗಾಗಲೇ 3.5 ಕಿ.ಮೀ ಉದ್ದಕ್ಕೆ ಬೇಲಿ ಹಾಕಲಾಗಿದೆ. ಇದನ್ನು ಹೊರತುಪಡಿಸಿ 10.5 ಕಿ.ಮೀ ಎತ್ತರದ ಕಾಂಕ್ರೀಟ್ ಗೋಡೆ ನಿರ್ಮಾಣಕ್ಕಾಗಿ ₹22 ಕೋಟಿ ಮಂಜೂರು ಮಾಡಲಾಗಿದೆ. ಸಂಪೂರ್ಣ ಯೋಜನಾ ಅಧ್ಯಯನವನ್ನೂ ಕೈಗೊಳ್ಳಲಾಗಿದೆ. ಹಾಗಾಗಿ ಈ ಕೃಷಿ ಫಾರ್ಮ್ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು 36 ತಿಂಗಳ ಸಮಯವಕಾಶ ನೀಡಬೇಕು’ ಎಂದು ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.</p>.<p>‘ಪ್ರಾರಂಭದಲ್ಲಿ ಈತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಎಸ್ಸಿ/ಎಸ್ಟಿ ಇಲಾಖೆಗೆ ನೀಡಲಾಗಿತ್ತು. ಇಲಾಖೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಆದರೆ ಇದಕ್ಕೆ ಸಂಬಂಧಿಸಿದ ನಿರ್ಧಾರವನ್ನು ಬಹಳ ಹಿಂದೆಯೇ ಕೈಗೊಳ್ಳಲಾಗಿತ್ತು. ಹಾಗಾಗಿ ಆ ಪ್ರದೇಶದಲ್ಲಿರುವ ಜನರ ಮತ್ತು ಅವರ ಆಸ್ತಿ ರಕ್ಷಣೆಗಾಗಿ ಯಾವುದೇ ವಿಳಂಬ ಮಾಡದೇ ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ನ್ಯಾಯಾಲಯವು ನಿರ್ದೇಶಿಸಿದೆ.</p>.<p>ಇದೇ ಮೊದಲ ಬಾರಿ ಲೋಕೋಪಯೋಗಿ ಇಲಾಖೆಯು ಈ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಿದೆ. ಹಾಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು 18 ತಿಂಗಳುಗಳು ಸಮಯಾವಕಾಶ ನೀಡಲು ಮಾತ್ರ ಸಾಧ್ಯ’ ಎಂದು ನ್ಯಾಯಾಲಯವು ತಿಳಿಸಿದೆ.</p>.<p>‘ಸರಿಯಾದ ಮೇಲ್ವಿಚಾರಣೆ ಇಲ್ಲದಿದ್ದರೆ ಈ ಕೆಲಸವು ಸಕಾಲದಲ್ಲಿ ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು. ಅಲ್ಲದೆ ಕಾಮಗಾರಿಯ ಮೇಲುಸ್ತುವಾರಿಯನ್ನು ವಹಿಸಬೇಕು’ ಎಂದು ನ್ಯಾಯಾಲಯವು ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>