<p><strong>ನೈನಿತಾಲ್ (ಉತ್ತರಾಖಂಡ): </strong>ರಾಜ್ಯದ ಗಢವಾಲ್ ಮತ್ತು ಕುಮಾಂವ್ ಪ್ರದೇಶ ವ್ಯಾಪ್ತಿಯಲ್ಲಿರುವ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು ಡಿನೋಟಿಫೈ ಮಾಡುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ರಾಜ್ಯ ವನ್ಯಜೀವಿ ಮಂಡಳಿಗೆ ನೋಟಿಸ್ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ (ಪ್ರಭಾರ) ರವಿ ಮಳೀಮಠ ಮತ್ತು ನ್ಯಾಯಮೂರ್ತಿ ಅಲೋಕ್ ಕುಮಾರ್ ವರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ ಸೋಮವಾರ ನೋಟಿಸ್ ಜಾರಿ ಮಾಡಿದ್ದು, ಪ್ರತಿವಾದಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲವಾಕಾಶ ನೀಡಿದೆ.</p>.<p>ಡೆಹ್ರಾಡೂನ್ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣವನ್ನು ವಿಸ್ತರಿಸುವುದಕ್ಕಾಗಿ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು ಡಿನೋಟಿಫಿಕೇಷನ್ ಮಾಡಲು ಉತ್ತರಾಖಂಡ ರಾಜ್ಯ ವನ್ಯಜೀವಿ ಮಂಡಳಿ ನಿರ್ಧರಿಸಿರುವುದರ ವಿರುದ್ಧ ಸುಮಾರು 80 ಪರಿಸರ ಕಾರ್ಯಕರ್ತರು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಈ ಪತ್ರವನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಎಂದು ಪರಿಗಣಿಸಿದ ನ್ಯಾಯಾಲಯ, ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತು.</p>.<p>ಉತ್ತರಾಖಂಡ ರಾಜ್ಯದ ಕುಮಾವೂನ್ ಮತ್ತು ಗರ್ವಾಲ್ ಪ್ರದೇಶಗಳ 5,400 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿಕೊಂಡಿರುವ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು 2002ರಲ್ಲಿ ಸರ್ಕಾರ ನೋಟಿಫೈ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೈನಿತಾಲ್ (ಉತ್ತರಾಖಂಡ): </strong>ರಾಜ್ಯದ ಗಢವಾಲ್ ಮತ್ತು ಕುಮಾಂವ್ ಪ್ರದೇಶ ವ್ಯಾಪ್ತಿಯಲ್ಲಿರುವ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು ಡಿನೋಟಿಫೈ ಮಾಡುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ರಾಜ್ಯ ವನ್ಯಜೀವಿ ಮಂಡಳಿಗೆ ನೋಟಿಸ್ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ (ಪ್ರಭಾರ) ರವಿ ಮಳೀಮಠ ಮತ್ತು ನ್ಯಾಯಮೂರ್ತಿ ಅಲೋಕ್ ಕುಮಾರ್ ವರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ ಸೋಮವಾರ ನೋಟಿಸ್ ಜಾರಿ ಮಾಡಿದ್ದು, ಪ್ರತಿವಾದಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲವಾಕಾಶ ನೀಡಿದೆ.</p>.<p>ಡೆಹ್ರಾಡೂನ್ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣವನ್ನು ವಿಸ್ತರಿಸುವುದಕ್ಕಾಗಿ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು ಡಿನೋಟಿಫಿಕೇಷನ್ ಮಾಡಲು ಉತ್ತರಾಖಂಡ ರಾಜ್ಯ ವನ್ಯಜೀವಿ ಮಂಡಳಿ ನಿರ್ಧರಿಸಿರುವುದರ ವಿರುದ್ಧ ಸುಮಾರು 80 ಪರಿಸರ ಕಾರ್ಯಕರ್ತರು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಈ ಪತ್ರವನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಎಂದು ಪರಿಗಣಿಸಿದ ನ್ಯಾಯಾಲಯ, ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತು.</p>.<p>ಉತ್ತರಾಖಂಡ ರಾಜ್ಯದ ಕುಮಾವೂನ್ ಮತ್ತು ಗರ್ವಾಲ್ ಪ್ರದೇಶಗಳ 5,400 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿಕೊಂಡಿರುವ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು 2002ರಲ್ಲಿ ಸರ್ಕಾರ ನೋಟಿಫೈ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>