‘ಸೂಕ್ತ ಸಿದ್ಧತೆ, ಅಧ್ಯಯನವಿಲ್ಲದೇ, ತರಾತುರಿಯಲ್ಲಿ ಈ ಅರ್ಜಿ ಸಲ್ಲಿಸಲಾಗಿದೆ‘ ಎಂದು ಹೇಳಿರುವ ಮುಖ್ಯ ನ್ಯಾಯ ಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ, ಈ ಅರ್ಜಿಯನ್ನು ಹಿಂದಕ್ಕೆ ಪಡೆಯಲು ಅರ್ಜಿದಾರರಿಗೆ ಅವಕಾಶ ನೀಡಿದೆ. ಹಾಗೆಯೇ, ಕಾನೂನಿನ ಅನುಸಾರವಾಗಿ, ಸೂಕ್ತ ದಾಖಲೆಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯವನ್ನೂ ನೀಡಿದೆ.